Homeಮುಖಪುಟಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

- Advertisement -
- Advertisement -

ಈಗಾಗಲೇ ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿವೆ. ಆದರೆ ಪ್ರಧಾನ ಮಂತ್ರಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಶಾಂಪಿಂಗ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹೀಗೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಿಂದ ಜವಳಿ ಮತ್ತು ವರ್ಣಚಿತ್ರಗಳನ್ನು ಖರೀದಿಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಆತ್ಮನಿರ್ಭರ ಆಗಬೇಕೆಂಬ ಭಾರತದ ಅಭಿಯಾನದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನಾವು ಬದ್ಧರಾಗೋಣ. ಇಂದು ನಾನು ಮಹಿಳಾ ಉದ್ಯಮ, ಸೃಜನಶೀಲತೆ ಮತ್ತು ಭಾರತದ ಸಂಸ್ಕೃತಿಯನ್ನು ಆಚರಿಸುವ ಕೆಲವು ಉತ್ಪನ್ನಗಳನ್ನು ಖರೀದಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯು ತಮಿಳುನಾಡಿನಿಂದ ರಾಜ್ಯದ ತೋಡಾ ಬುಡಕಟ್ಟು ಜನಾಂಗದವರು ಕೈಯಿಂದ ಕಸೂತಿ ಮಾಡಿದ ಶಾಲು ಖರೀದಿಸಿದರು. “ತಮಿಳುನಾಡಿನ ತೋಡಾ ಬುಡಕಟ್ಟಿನ ಕುಶಲಕರ್ಮಿಗಳು ತಯಾರಿಸಿದ ಸೊಗಸಾದ ಕೈ-ಕಸೂತಿ ಶಾಲ್ ಅದ್ಭುತವಾಗಿದೆ. ನಾನು ಅಂತಹ ಒಂದು ಶಾಲು ಖರೀದಿಸಿದೆ. ಈ ಉತ್ಪನ್ನವನ್ನು ಟ್ರೈಬ್ಸ್ ಇಂಡಿಯಾ ಮಾರಾಟ ಮಾಡಿದೆ” ಎಂದು ಮೋದಿ ಆನ್‌ಲೈನ್‌ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

ಪ್ರಧಾನ ಮಂತ್ರಿ ಅದೇ ಆನ್‌ಲೈನ್‌ ಮಾರಾಟಗಾರರಿಂದ ಕರಕುಶಲ ಗೋಂಡ್ ಪೇಪರ್ ಪೇಂಟಿಂಗ್ ಖರೀದಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿ, “ಭಾರತವು ನಾಗ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಇದು ಧೈರ್ಯ, ಸಹಾನುಭೂತಿ ಮತ್ತು ಸೃಜನಶೀಲತೆಗೆ ಸಮಾನಾರ್ಥಕವಾಗಿದೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿದೆ” ಎಂದು ಬರೆದಿದ್ದಾರೆ.

ಮಧುಬನಿ ವರ್ಣಚಿತ್ರಗಳುಲ್ಲ ಖಾದಿ ಹತ್ತಿ ಶಾಲನ್ನು ಖರೀದಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಖಾದಿ ಮಹಾತ್ಮ ಗಾಂಧಿ ಮತ್ತು ಭಾರತದ ಶ್ರೀಮಂತ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿದೆ. ಖಾದಿ ಹತ್ತಿ ಮಧುಬನಿ ಪೇಂಟೆಡ್ ಸ್ಟೋಲ್ ಖರೀದಿಸಿದೆ. ಇದು ಉತ್ತಮ ಗುಣಮಟ್ಟದ ಉತ್ಪನ್ನವಾಗಿದೆ ಮತ್ತು ಇದು ನಮ್ಮ ನಾಗರಿಕರ ಸೃಜನಶೀಲತೆಗೆ ನಿಕಟ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ಚುನಾವಣೆ ಘೋಷಣೆಯಾಗಿರುವ ಮತ್ತೊಂದು ರಾಜ್ಯ ಪಶ್ಚಿಮ ಬಂಗಾಳದಿಂದಲೂ ಪ್ರಧಾನಿ ಮೋದಿ ಶಾಪಿಂಗ್ ಮಾಡಿದ್ದಾರೆ. “ನಾನು ಖಂಡಿತವಾಗಿಯೂ ಪಶ್ಚಿಮ ಬಂಗಾಳದ ಈ ಕೈಯಿಂದ ಮಾಡಿದ ಸೆಣಬಿನ ಫೈಲ್ ಫೋಲ್ಡರ್ ಅನ್ನು ಬಳಸಲಿದ್ದೇನೆ. ಇದು ರಾಜ್ಯದ ಬುಡಕಟ್ಟು ಸಮುದಾಯಗಳಿಂದ ಮಾಡಲ್ಪಟ್ಟಿದೆ, ನೀವೆಲ್ಲರೂ ಪಶ್ಚಿಮ ಬಂಗಾಳದಿಂದ ಸೆಣಬಿನ ಉತ್ಪನ್ನವನ್ನು ನಿಮ್ಮ ಮನೆಗಳಲ್ಲಿ ಹೊಂದಿರಬೇಕು!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂ ರಾಜ್ಯದಲ್ಲಿ ತಯಾರಾಗುವ ಅಸ್ಸಾಮೀಸ್ ಗಮುಸಾ ಖರೀದಿಸಿದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ನಾನು ಆಗಾಗ್ಗೆ ಗಮುಸಾ ಧರಿಸುವುದನ್ನು ನೀವು ನೋಡಿದ್ದೀರಿ. ಇದು ಅತ್ಯಂತ ಆರಾಮದಾಯಕವಾಗಿದೆ. ಇಂದು ನಾನು ಕಾಕತಿಪಪುಂಗ್ ಡೆವಲಪ್‌ಮೆಂಟ್ ಬ್ಲಾಕ್‌ನ ವಿವಿಧ ಸ್ವ-ಸಹಾಯ ಗುಂಪುಗಳು ತಯಾರಿಸಿದ ಗಮುಸಾವನ್ನು ಖರೀದಿಸಿದೆ” ಎಂದು ಹೇಳಿದ್ದಾದ್ದಾರೆ.

ಮುಂದಕ್ಕೆ ಚುನಾವಣೆ ಇರುವ ಮತ್ತೊಂದು ರಾಜ್ಯವಾದ ಕೇರಳದಿಂದ ಪ್ರಧಾನಿಯು ತೆಂಗಿನ ಚಿಪ್ಪಿನಿಂದ ಮಾಡಿರುವ ‘ನಿಲಾವಿಲಕ್ಕು’ ಎಂಬ ದೀಪದ ಕಂಬವನ್ನು ಖರೀದಿಸಿದ್ದಾರೆ.

“ಕೇರಳ ಮೂಲದ ಮಹಿಳೆಯರು ತಯಾರಿಸಿದ ಕ್ಲಾಸಿಕ್ ಪಾಮ್ ಕ್ರಾಫ್ಟ್ ನಿಲಾವಿಲಕ್ಕು ಸ್ವೀಕರಿಸಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಮ್ಮ ಮಹಿಳಾ ಶಕ್ತಿ ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಉತ್ಪನ್ನಗಳನ್ನು ಹೇಗೆ ಸಂರಕ್ಷಿಸಿದೆ ಮತ್ತು ಜನಪ್ರಿಯಗೊಳಿಸಿದೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2021Live | ರಾಜ್ಯ ಬಜೆಟ್ ಫೇಸ್‌‌ಬುಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...