Homeಮುಖಪುಟಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

- Advertisement -
- Advertisement -

ಈಗಾಗಲೇ ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿವೆ. ಆದರೆ ಪ್ರಧಾನ ಮಂತ್ರಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಶಾಂಪಿಂಗ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹೀಗೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಿಂದ ಜವಳಿ ಮತ್ತು ವರ್ಣಚಿತ್ರಗಳನ್ನು ಖರೀದಿಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಆತ್ಮನಿರ್ಭರ ಆಗಬೇಕೆಂಬ ಭಾರತದ ಅಭಿಯಾನದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನಾವು ಬದ್ಧರಾಗೋಣ. ಇಂದು ನಾನು ಮಹಿಳಾ ಉದ್ಯಮ, ಸೃಜನಶೀಲತೆ ಮತ್ತು ಭಾರತದ ಸಂಸ್ಕೃತಿಯನ್ನು ಆಚರಿಸುವ ಕೆಲವು ಉತ್ಪನ್ನಗಳನ್ನು ಖರೀದಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯು ತಮಿಳುನಾಡಿನಿಂದ ರಾಜ್ಯದ ತೋಡಾ ಬುಡಕಟ್ಟು ಜನಾಂಗದವರು ಕೈಯಿಂದ ಕಸೂತಿ ಮಾಡಿದ ಶಾಲು ಖರೀದಿಸಿದರು. “ತಮಿಳುನಾಡಿನ ತೋಡಾ ಬುಡಕಟ್ಟಿನ ಕುಶಲಕರ್ಮಿಗಳು ತಯಾರಿಸಿದ ಸೊಗಸಾದ ಕೈ-ಕಸೂತಿ ಶಾಲ್ ಅದ್ಭುತವಾಗಿದೆ. ನಾನು ಅಂತಹ ಒಂದು ಶಾಲು ಖರೀದಿಸಿದೆ. ಈ ಉತ್ಪನ್ನವನ್ನು ಟ್ರೈಬ್ಸ್ ಇಂಡಿಯಾ ಮಾರಾಟ ಮಾಡಿದೆ” ಎಂದು ಮೋದಿ ಆನ್‌ಲೈನ್‌ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

ಪ್ರಧಾನ ಮಂತ್ರಿ ಅದೇ ಆನ್‌ಲೈನ್‌ ಮಾರಾಟಗಾರರಿಂದ ಕರಕುಶಲ ಗೋಂಡ್ ಪೇಪರ್ ಪೇಂಟಿಂಗ್ ಖರೀದಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿ, “ಭಾರತವು ನಾಗ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಇದು ಧೈರ್ಯ, ಸಹಾನುಭೂತಿ ಮತ್ತು ಸೃಜನಶೀಲತೆಗೆ ಸಮಾನಾರ್ಥಕವಾಗಿದೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿದೆ” ಎಂದು ಬರೆದಿದ್ದಾರೆ.

ಮಧುಬನಿ ವರ್ಣಚಿತ್ರಗಳುಲ್ಲ ಖಾದಿ ಹತ್ತಿ ಶಾಲನ್ನು ಖರೀದಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಖಾದಿ ಮಹಾತ್ಮ ಗಾಂಧಿ ಮತ್ತು ಭಾರತದ ಶ್ರೀಮಂತ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿದೆ. ಖಾದಿ ಹತ್ತಿ ಮಧುಬನಿ ಪೇಂಟೆಡ್ ಸ್ಟೋಲ್ ಖರೀದಿಸಿದೆ. ಇದು ಉತ್ತಮ ಗುಣಮಟ್ಟದ ಉತ್ಪನ್ನವಾಗಿದೆ ಮತ್ತು ಇದು ನಮ್ಮ ನಾಗರಿಕರ ಸೃಜನಶೀಲತೆಗೆ ನಿಕಟ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ಚುನಾವಣೆ ಘೋಷಣೆಯಾಗಿರುವ ಮತ್ತೊಂದು ರಾಜ್ಯ ಪಶ್ಚಿಮ ಬಂಗಾಳದಿಂದಲೂ ಪ್ರಧಾನಿ ಮೋದಿ ಶಾಪಿಂಗ್ ಮಾಡಿದ್ದಾರೆ. “ನಾನು ಖಂಡಿತವಾಗಿಯೂ ಪಶ್ಚಿಮ ಬಂಗಾಳದ ಈ ಕೈಯಿಂದ ಮಾಡಿದ ಸೆಣಬಿನ ಫೈಲ್ ಫೋಲ್ಡರ್ ಅನ್ನು ಬಳಸಲಿದ್ದೇನೆ. ಇದು ರಾಜ್ಯದ ಬುಡಕಟ್ಟು ಸಮುದಾಯಗಳಿಂದ ಮಾಡಲ್ಪಟ್ಟಿದೆ, ನೀವೆಲ್ಲರೂ ಪಶ್ಚಿಮ ಬಂಗಾಳದಿಂದ ಸೆಣಬಿನ ಉತ್ಪನ್ನವನ್ನು ನಿಮ್ಮ ಮನೆಗಳಲ್ಲಿ ಹೊಂದಿರಬೇಕು!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂ ರಾಜ್ಯದಲ್ಲಿ ತಯಾರಾಗುವ ಅಸ್ಸಾಮೀಸ್ ಗಮುಸಾ ಖರೀದಿಸಿದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ನಾನು ಆಗಾಗ್ಗೆ ಗಮುಸಾ ಧರಿಸುವುದನ್ನು ನೀವು ನೋಡಿದ್ದೀರಿ. ಇದು ಅತ್ಯಂತ ಆರಾಮದಾಯಕವಾಗಿದೆ. ಇಂದು ನಾನು ಕಾಕತಿಪಪುಂಗ್ ಡೆವಲಪ್‌ಮೆಂಟ್ ಬ್ಲಾಕ್‌ನ ವಿವಿಧ ಸ್ವ-ಸಹಾಯ ಗುಂಪುಗಳು ತಯಾರಿಸಿದ ಗಮುಸಾವನ್ನು ಖರೀದಿಸಿದೆ” ಎಂದು ಹೇಳಿದ್ದಾದ್ದಾರೆ.

ಮುಂದಕ್ಕೆ ಚುನಾವಣೆ ಇರುವ ಮತ್ತೊಂದು ರಾಜ್ಯವಾದ ಕೇರಳದಿಂದ ಪ್ರಧಾನಿಯು ತೆಂಗಿನ ಚಿಪ್ಪಿನಿಂದ ಮಾಡಿರುವ ‘ನಿಲಾವಿಲಕ್ಕು’ ಎಂಬ ದೀಪದ ಕಂಬವನ್ನು ಖರೀದಿಸಿದ್ದಾರೆ.

“ಕೇರಳ ಮೂಲದ ಮಹಿಳೆಯರು ತಯಾರಿಸಿದ ಕ್ಲಾಸಿಕ್ ಪಾಮ್ ಕ್ರಾಫ್ಟ್ ನಿಲಾವಿಲಕ್ಕು ಸ್ವೀಕರಿಸಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಮ್ಮ ಮಹಿಳಾ ಶಕ್ತಿ ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಉತ್ಪನ್ನಗಳನ್ನು ಹೇಗೆ ಸಂರಕ್ಷಿಸಿದೆ ಮತ್ತು ಜನಪ್ರಿಯಗೊಳಿಸಿದೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2021Live | ರಾಜ್ಯ ಬಜೆಟ್ ಫೇಸ್‌‌ಬುಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...