Homeಮುಖಪುಟಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

- Advertisement -
- Advertisement -

ಈಗಾಗಲೇ ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿವೆ. ಆದರೆ ಪ್ರಧಾನ ಮಂತ್ರಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಶಾಂಪಿಂಗ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹೀಗೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಿಂದ ಜವಳಿ ಮತ್ತು ವರ್ಣಚಿತ್ರಗಳನ್ನು ಖರೀದಿಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಆತ್ಮನಿರ್ಭರ ಆಗಬೇಕೆಂಬ ಭಾರತದ ಅಭಿಯಾನದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನಾವು ಬದ್ಧರಾಗೋಣ. ಇಂದು ನಾನು ಮಹಿಳಾ ಉದ್ಯಮ, ಸೃಜನಶೀಲತೆ ಮತ್ತು ಭಾರತದ ಸಂಸ್ಕೃತಿಯನ್ನು ಆಚರಿಸುವ ಕೆಲವು ಉತ್ಪನ್ನಗಳನ್ನು ಖರೀದಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯು ತಮಿಳುನಾಡಿನಿಂದ ರಾಜ್ಯದ ತೋಡಾ ಬುಡಕಟ್ಟು ಜನಾಂಗದವರು ಕೈಯಿಂದ ಕಸೂತಿ ಮಾಡಿದ ಶಾಲು ಖರೀದಿಸಿದರು. “ತಮಿಳುನಾಡಿನ ತೋಡಾ ಬುಡಕಟ್ಟಿನ ಕುಶಲಕರ್ಮಿಗಳು ತಯಾರಿಸಿದ ಸೊಗಸಾದ ಕೈ-ಕಸೂತಿ ಶಾಲ್ ಅದ್ಭುತವಾಗಿದೆ. ನಾನು ಅಂತಹ ಒಂದು ಶಾಲು ಖರೀದಿಸಿದೆ. ಈ ಉತ್ಪನ್ನವನ್ನು ಟ್ರೈಬ್ಸ್ ಇಂಡಿಯಾ ಮಾರಾಟ ಮಾಡಿದೆ” ಎಂದು ಮೋದಿ ಆನ್‌ಲೈನ್‌ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

ಪ್ರಧಾನ ಮಂತ್ರಿ ಅದೇ ಆನ್‌ಲೈನ್‌ ಮಾರಾಟಗಾರರಿಂದ ಕರಕುಶಲ ಗೋಂಡ್ ಪೇಪರ್ ಪೇಂಟಿಂಗ್ ಖರೀದಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿ, “ಭಾರತವು ನಾಗ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಇದು ಧೈರ್ಯ, ಸಹಾನುಭೂತಿ ಮತ್ತು ಸೃಜನಶೀಲತೆಗೆ ಸಮಾನಾರ್ಥಕವಾಗಿದೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿದೆ” ಎಂದು ಬರೆದಿದ್ದಾರೆ.

ಮಧುಬನಿ ವರ್ಣಚಿತ್ರಗಳುಲ್ಲ ಖಾದಿ ಹತ್ತಿ ಶಾಲನ್ನು ಖರೀದಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಖಾದಿ ಮಹಾತ್ಮ ಗಾಂಧಿ ಮತ್ತು ಭಾರತದ ಶ್ರೀಮಂತ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿದೆ. ಖಾದಿ ಹತ್ತಿ ಮಧುಬನಿ ಪೇಂಟೆಡ್ ಸ್ಟೋಲ್ ಖರೀದಿಸಿದೆ. ಇದು ಉತ್ತಮ ಗುಣಮಟ್ಟದ ಉತ್ಪನ್ನವಾಗಿದೆ ಮತ್ತು ಇದು ನಮ್ಮ ನಾಗರಿಕರ ಸೃಜನಶೀಲತೆಗೆ ನಿಕಟ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ಚುನಾವಣೆ ಘೋಷಣೆಯಾಗಿರುವ ಮತ್ತೊಂದು ರಾಜ್ಯ ಪಶ್ಚಿಮ ಬಂಗಾಳದಿಂದಲೂ ಪ್ರಧಾನಿ ಮೋದಿ ಶಾಪಿಂಗ್ ಮಾಡಿದ್ದಾರೆ. “ನಾನು ಖಂಡಿತವಾಗಿಯೂ ಪಶ್ಚಿಮ ಬಂಗಾಳದ ಈ ಕೈಯಿಂದ ಮಾಡಿದ ಸೆಣಬಿನ ಫೈಲ್ ಫೋಲ್ಡರ್ ಅನ್ನು ಬಳಸಲಿದ್ದೇನೆ. ಇದು ರಾಜ್ಯದ ಬುಡಕಟ್ಟು ಸಮುದಾಯಗಳಿಂದ ಮಾಡಲ್ಪಟ್ಟಿದೆ, ನೀವೆಲ್ಲರೂ ಪಶ್ಚಿಮ ಬಂಗಾಳದಿಂದ ಸೆಣಬಿನ ಉತ್ಪನ್ನವನ್ನು ನಿಮ್ಮ ಮನೆಗಳಲ್ಲಿ ಹೊಂದಿರಬೇಕು!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂ ರಾಜ್ಯದಲ್ಲಿ ತಯಾರಾಗುವ ಅಸ್ಸಾಮೀಸ್ ಗಮುಸಾ ಖರೀದಿಸಿದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ನಾನು ಆಗಾಗ್ಗೆ ಗಮುಸಾ ಧರಿಸುವುದನ್ನು ನೀವು ನೋಡಿದ್ದೀರಿ. ಇದು ಅತ್ಯಂತ ಆರಾಮದಾಯಕವಾಗಿದೆ. ಇಂದು ನಾನು ಕಾಕತಿಪಪುಂಗ್ ಡೆವಲಪ್‌ಮೆಂಟ್ ಬ್ಲಾಕ್‌ನ ವಿವಿಧ ಸ್ವ-ಸಹಾಯ ಗುಂಪುಗಳು ತಯಾರಿಸಿದ ಗಮುಸಾವನ್ನು ಖರೀದಿಸಿದೆ” ಎಂದು ಹೇಳಿದ್ದಾದ್ದಾರೆ.

ಮುಂದಕ್ಕೆ ಚುನಾವಣೆ ಇರುವ ಮತ್ತೊಂದು ರಾಜ್ಯವಾದ ಕೇರಳದಿಂದ ಪ್ರಧಾನಿಯು ತೆಂಗಿನ ಚಿಪ್ಪಿನಿಂದ ಮಾಡಿರುವ ‘ನಿಲಾವಿಲಕ್ಕು’ ಎಂಬ ದೀಪದ ಕಂಬವನ್ನು ಖರೀದಿಸಿದ್ದಾರೆ.

“ಕೇರಳ ಮೂಲದ ಮಹಿಳೆಯರು ತಯಾರಿಸಿದ ಕ್ಲಾಸಿಕ್ ಪಾಮ್ ಕ್ರಾಫ್ಟ್ ನಿಲಾವಿಲಕ್ಕು ಸ್ವೀಕರಿಸಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಮ್ಮ ಮಹಿಳಾ ಶಕ್ತಿ ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಉತ್ಪನ್ನಗಳನ್ನು ಹೇಗೆ ಸಂರಕ್ಷಿಸಿದೆ ಮತ್ತು ಜನಪ್ರಿಯಗೊಳಿಸಿದೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2021Live | ರಾಜ್ಯ ಬಜೆಟ್ ಫೇಸ್‌‌ಬುಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...