Homeಮುಖಪುಟಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

- Advertisement -
- Advertisement -

ಈಗಾಗಲೇ ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿವೆ. ಆದರೆ ಪ್ರಧಾನ ಮಂತ್ರಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಶಾಂಪಿಂಗ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹೀಗೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಿಂದ ಜವಳಿ ಮತ್ತು ವರ್ಣಚಿತ್ರಗಳನ್ನು ಖರೀದಿಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಆತ್ಮನಿರ್ಭರ ಆಗಬೇಕೆಂಬ ಭಾರತದ ಅಭಿಯಾನದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನಾವು ಬದ್ಧರಾಗೋಣ. ಇಂದು ನಾನು ಮಹಿಳಾ ಉದ್ಯಮ, ಸೃಜನಶೀಲತೆ ಮತ್ತು ಭಾರತದ ಸಂಸ್ಕೃತಿಯನ್ನು ಆಚರಿಸುವ ಕೆಲವು ಉತ್ಪನ್ನಗಳನ್ನು ಖರೀದಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯು ತಮಿಳುನಾಡಿನಿಂದ ರಾಜ್ಯದ ತೋಡಾ ಬುಡಕಟ್ಟು ಜನಾಂಗದವರು ಕೈಯಿಂದ ಕಸೂತಿ ಮಾಡಿದ ಶಾಲು ಖರೀದಿಸಿದರು. “ತಮಿಳುನಾಡಿನ ತೋಡಾ ಬುಡಕಟ್ಟಿನ ಕುಶಲಕರ್ಮಿಗಳು ತಯಾರಿಸಿದ ಸೊಗಸಾದ ಕೈ-ಕಸೂತಿ ಶಾಲ್ ಅದ್ಭುತವಾಗಿದೆ. ನಾನು ಅಂತಹ ಒಂದು ಶಾಲು ಖರೀದಿಸಿದೆ. ಈ ಉತ್ಪನ್ನವನ್ನು ಟ್ರೈಬ್ಸ್ ಇಂಡಿಯಾ ಮಾರಾಟ ಮಾಡಿದೆ” ಎಂದು ಮೋದಿ ಆನ್‌ಲೈನ್‌ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

ಪ್ರಧಾನ ಮಂತ್ರಿ ಅದೇ ಆನ್‌ಲೈನ್‌ ಮಾರಾಟಗಾರರಿಂದ ಕರಕುಶಲ ಗೋಂಡ್ ಪೇಪರ್ ಪೇಂಟಿಂಗ್ ಖರೀದಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿ, “ಭಾರತವು ನಾಗ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಇದು ಧೈರ್ಯ, ಸಹಾನುಭೂತಿ ಮತ್ತು ಸೃಜನಶೀಲತೆಗೆ ಸಮಾನಾರ್ಥಕವಾಗಿದೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿದೆ” ಎಂದು ಬರೆದಿದ್ದಾರೆ.

ಮಧುಬನಿ ವರ್ಣಚಿತ್ರಗಳುಲ್ಲ ಖಾದಿ ಹತ್ತಿ ಶಾಲನ್ನು ಖರೀದಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಖಾದಿ ಮಹಾತ್ಮ ಗಾಂಧಿ ಮತ್ತು ಭಾರತದ ಶ್ರೀಮಂತ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿದೆ. ಖಾದಿ ಹತ್ತಿ ಮಧುಬನಿ ಪೇಂಟೆಡ್ ಸ್ಟೋಲ್ ಖರೀದಿಸಿದೆ. ಇದು ಉತ್ತಮ ಗುಣಮಟ್ಟದ ಉತ್ಪನ್ನವಾಗಿದೆ ಮತ್ತು ಇದು ನಮ್ಮ ನಾಗರಿಕರ ಸೃಜನಶೀಲತೆಗೆ ನಿಕಟ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ಚುನಾವಣೆ ಘೋಷಣೆಯಾಗಿರುವ ಮತ್ತೊಂದು ರಾಜ್ಯ ಪಶ್ಚಿಮ ಬಂಗಾಳದಿಂದಲೂ ಪ್ರಧಾನಿ ಮೋದಿ ಶಾಪಿಂಗ್ ಮಾಡಿದ್ದಾರೆ. “ನಾನು ಖಂಡಿತವಾಗಿಯೂ ಪಶ್ಚಿಮ ಬಂಗಾಳದ ಈ ಕೈಯಿಂದ ಮಾಡಿದ ಸೆಣಬಿನ ಫೈಲ್ ಫೋಲ್ಡರ್ ಅನ್ನು ಬಳಸಲಿದ್ದೇನೆ. ಇದು ರಾಜ್ಯದ ಬುಡಕಟ್ಟು ಸಮುದಾಯಗಳಿಂದ ಮಾಡಲ್ಪಟ್ಟಿದೆ, ನೀವೆಲ್ಲರೂ ಪಶ್ಚಿಮ ಬಂಗಾಳದಿಂದ ಸೆಣಬಿನ ಉತ್ಪನ್ನವನ್ನು ನಿಮ್ಮ ಮನೆಗಳಲ್ಲಿ ಹೊಂದಿರಬೇಕು!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂ ರಾಜ್ಯದಲ್ಲಿ ತಯಾರಾಗುವ ಅಸ್ಸಾಮೀಸ್ ಗಮುಸಾ ಖರೀದಿಸಿದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ನಾನು ಆಗಾಗ್ಗೆ ಗಮುಸಾ ಧರಿಸುವುದನ್ನು ನೀವು ನೋಡಿದ್ದೀರಿ. ಇದು ಅತ್ಯಂತ ಆರಾಮದಾಯಕವಾಗಿದೆ. ಇಂದು ನಾನು ಕಾಕತಿಪಪುಂಗ್ ಡೆವಲಪ್‌ಮೆಂಟ್ ಬ್ಲಾಕ್‌ನ ವಿವಿಧ ಸ್ವ-ಸಹಾಯ ಗುಂಪುಗಳು ತಯಾರಿಸಿದ ಗಮುಸಾವನ್ನು ಖರೀದಿಸಿದೆ” ಎಂದು ಹೇಳಿದ್ದಾದ್ದಾರೆ.

ಮುಂದಕ್ಕೆ ಚುನಾವಣೆ ಇರುವ ಮತ್ತೊಂದು ರಾಜ್ಯವಾದ ಕೇರಳದಿಂದ ಪ್ರಧಾನಿಯು ತೆಂಗಿನ ಚಿಪ್ಪಿನಿಂದ ಮಾಡಿರುವ ‘ನಿಲಾವಿಲಕ್ಕು’ ಎಂಬ ದೀಪದ ಕಂಬವನ್ನು ಖರೀದಿಸಿದ್ದಾರೆ.

“ಕೇರಳ ಮೂಲದ ಮಹಿಳೆಯರು ತಯಾರಿಸಿದ ಕ್ಲಾಸಿಕ್ ಪಾಮ್ ಕ್ರಾಫ್ಟ್ ನಿಲಾವಿಲಕ್ಕು ಸ್ವೀಕರಿಸಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಮ್ಮ ಮಹಿಳಾ ಶಕ್ತಿ ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಉತ್ಪನ್ನಗಳನ್ನು ಹೇಗೆ ಸಂರಕ್ಷಿಸಿದೆ ಮತ್ತು ಜನಪ್ರಿಯಗೊಳಿಸಿದೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2021Live | ರಾಜ್ಯ ಬಜೆಟ್ ಫೇಸ್‌‌ಬುಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...