Homeಮುಖಪುಟಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

ಚುನಾವಣೆಯಿರುವ ರಾಜ್ಯಗಳಿಂದ ಆನ್‌ಲೈನ್‌ ಶಾಪಿಂಗ್ ಮಾಡಿದ ಮೋದಿ!

- Advertisement -
- Advertisement -

ಈಗಾಗಲೇ ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿವೆ. ಆದರೆ ಪ್ರಧಾನ ಮಂತ್ರಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಶಾಂಪಿಂಗ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಗಾಲ್ಯಾಂಡ್ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹೀಗೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಿಂದ ಜವಳಿ ಮತ್ತು ವರ್ಣಚಿತ್ರಗಳನ್ನು ಖರೀದಿಸಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಆತ್ಮನಿರ್ಭರ ಆಗಬೇಕೆಂಬ ಭಾರತದ ಅಭಿಯಾನದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನಾವು ಬದ್ಧರಾಗೋಣ. ಇಂದು ನಾನು ಮಹಿಳಾ ಉದ್ಯಮ, ಸೃಜನಶೀಲತೆ ಮತ್ತು ಭಾರತದ ಸಂಸ್ಕೃತಿಯನ್ನು ಆಚರಿಸುವ ಕೆಲವು ಉತ್ಪನ್ನಗಳನ್ನು ಖರೀದಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯು ತಮಿಳುನಾಡಿನಿಂದ ರಾಜ್ಯದ ತೋಡಾ ಬುಡಕಟ್ಟು ಜನಾಂಗದವರು ಕೈಯಿಂದ ಕಸೂತಿ ಮಾಡಿದ ಶಾಲು ಖರೀದಿಸಿದರು. “ತಮಿಳುನಾಡಿನ ತೋಡಾ ಬುಡಕಟ್ಟಿನ ಕುಶಲಕರ್ಮಿಗಳು ತಯಾರಿಸಿದ ಸೊಗಸಾದ ಕೈ-ಕಸೂತಿ ಶಾಲ್ ಅದ್ಭುತವಾಗಿದೆ. ನಾನು ಅಂತಹ ಒಂದು ಶಾಲು ಖರೀದಿಸಿದೆ. ಈ ಉತ್ಪನ್ನವನ್ನು ಟ್ರೈಬ್ಸ್ ಇಂಡಿಯಾ ಮಾರಾಟ ಮಾಡಿದೆ” ಎಂದು ಮೋದಿ ಆನ್‌ಲೈನ್‌ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

ಪ್ರಧಾನ ಮಂತ್ರಿ ಅದೇ ಆನ್‌ಲೈನ್‌ ಮಾರಾಟಗಾರರಿಂದ ಕರಕುಶಲ ಗೋಂಡ್ ಪೇಪರ್ ಪೇಂಟಿಂಗ್ ಖರೀದಿಸಿದ್ದಾರೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿ, “ಭಾರತವು ನಾಗ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಇದು ಧೈರ್ಯ, ಸಹಾನುಭೂತಿ ಮತ್ತು ಸೃಜನಶೀಲತೆಗೆ ಸಮಾನಾರ್ಥಕವಾಗಿದೆ. ನಾಗಾಲ್ಯಾಂಡ್‌ನಿಂದ ಸಾಂಪ್ರದಾಯಿಕ ಶಾಲು ಖರೀದಿಸಿದೆ” ಎಂದು ಬರೆದಿದ್ದಾರೆ.

ಮಧುಬನಿ ವರ್ಣಚಿತ್ರಗಳುಲ್ಲ ಖಾದಿ ಹತ್ತಿ ಶಾಲನ್ನು ಖರೀದಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಖಾದಿ ಮಹಾತ್ಮ ಗಾಂಧಿ ಮತ್ತು ಭಾರತದ ಶ್ರೀಮಂತ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿದೆ. ಖಾದಿ ಹತ್ತಿ ಮಧುಬನಿ ಪೇಂಟೆಡ್ ಸ್ಟೋಲ್ ಖರೀದಿಸಿದೆ. ಇದು ಉತ್ತಮ ಗುಣಮಟ್ಟದ ಉತ್ಪನ್ನವಾಗಿದೆ ಮತ್ತು ಇದು ನಮ್ಮ ನಾಗರಿಕರ ಸೃಜನಶೀಲತೆಗೆ ನಿಕಟ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ಚುನಾವಣೆ ಘೋಷಣೆಯಾಗಿರುವ ಮತ್ತೊಂದು ರಾಜ್ಯ ಪಶ್ಚಿಮ ಬಂಗಾಳದಿಂದಲೂ ಪ್ರಧಾನಿ ಮೋದಿ ಶಾಪಿಂಗ್ ಮಾಡಿದ್ದಾರೆ. “ನಾನು ಖಂಡಿತವಾಗಿಯೂ ಪಶ್ಚಿಮ ಬಂಗಾಳದ ಈ ಕೈಯಿಂದ ಮಾಡಿದ ಸೆಣಬಿನ ಫೈಲ್ ಫೋಲ್ಡರ್ ಅನ್ನು ಬಳಸಲಿದ್ದೇನೆ. ಇದು ರಾಜ್ಯದ ಬುಡಕಟ್ಟು ಸಮುದಾಯಗಳಿಂದ ಮಾಡಲ್ಪಟ್ಟಿದೆ, ನೀವೆಲ್ಲರೂ ಪಶ್ಚಿಮ ಬಂಗಾಳದಿಂದ ಸೆಣಬಿನ ಉತ್ಪನ್ನವನ್ನು ನಿಮ್ಮ ಮನೆಗಳಲ್ಲಿ ಹೊಂದಿರಬೇಕು!” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂ ರಾಜ್ಯದಲ್ಲಿ ತಯಾರಾಗುವ ಅಸ್ಸಾಮೀಸ್ ಗಮುಸಾ ಖರೀದಿಸಿದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ನಾನು ಆಗಾಗ್ಗೆ ಗಮುಸಾ ಧರಿಸುವುದನ್ನು ನೀವು ನೋಡಿದ್ದೀರಿ. ಇದು ಅತ್ಯಂತ ಆರಾಮದಾಯಕವಾಗಿದೆ. ಇಂದು ನಾನು ಕಾಕತಿಪಪುಂಗ್ ಡೆವಲಪ್‌ಮೆಂಟ್ ಬ್ಲಾಕ್‌ನ ವಿವಿಧ ಸ್ವ-ಸಹಾಯ ಗುಂಪುಗಳು ತಯಾರಿಸಿದ ಗಮುಸಾವನ್ನು ಖರೀದಿಸಿದೆ” ಎಂದು ಹೇಳಿದ್ದಾದ್ದಾರೆ.

ಮುಂದಕ್ಕೆ ಚುನಾವಣೆ ಇರುವ ಮತ್ತೊಂದು ರಾಜ್ಯವಾದ ಕೇರಳದಿಂದ ಪ್ರಧಾನಿಯು ತೆಂಗಿನ ಚಿಪ್ಪಿನಿಂದ ಮಾಡಿರುವ ‘ನಿಲಾವಿಲಕ್ಕು’ ಎಂಬ ದೀಪದ ಕಂಬವನ್ನು ಖರೀದಿಸಿದ್ದಾರೆ.

“ಕೇರಳ ಮೂಲದ ಮಹಿಳೆಯರು ತಯಾರಿಸಿದ ಕ್ಲಾಸಿಕ್ ಪಾಮ್ ಕ್ರಾಫ್ಟ್ ನಿಲಾವಿಲಕ್ಕು ಸ್ವೀಕರಿಸಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಮ್ಮ ಮಹಿಳಾ ಶಕ್ತಿ ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಉತ್ಪನ್ನಗಳನ್ನು ಹೇಗೆ ಸಂರಕ್ಷಿಸಿದೆ ಮತ್ತು ಜನಪ್ರಿಯಗೊಳಿಸಿದೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2021Live | ರಾಜ್ಯ ಬಜೆಟ್ ಫೇಸ್‌‌ಬುಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...