Homeಮುಖಪುಟಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

- Advertisement -
- Advertisement -

ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಘಡದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ರೈತರ ಸಮಸ್ಯೆ ಸಹ ಒಂದು ಮಹತ್ವದ ಅಂಶವಾಗಿತ್ತು ಎಂಬ ಮಾತುಗಳು ಕೇಳಿಬಂದಿವೆ. ಈಗ ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರ ರೈತರಿಗೆ ಕೊಟ್ಟಿದ್ದೇನು ಎಂಬುದನ್ನು ವಿಶ್ಲೇಷಿಸಿದ್ದಾರೆ ಎಐಕೆಎಸ್‍ಸಿಸಿ ರೈತ ಹೋರಾಟ ಸಮಿತಿಯ ಯೋಗೇಂದ್ರ ಯಾದವ್. ವಿಡಿಯೋ ನೋಡಿ

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?
ಕಳೆದ 70 ವರ್ಷಗಳಲ್ಲಿ ಯಾವ ಸರ್ಕಾರವು ರೈತಸ್ನೇಹಿಯಾಗಿ ಕೆಲಸ ಮಾಡಿಲ್ಲ. ಆದ್ರೆ ಅದೇ 70 ವರ್ಷದಲ್ಲಿ ಯಾವ ಸರ್ಕಾರವು ಇಷ್ಟು ಪ್ರಮಾಣದಲ್ಲಿ ರೈತದ್ರೋಹಿ ಆಗಿರಲಿಲ್ಲ.
ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸುಮಾರಷ್ಟು ಆಶ್ವಾಸನೆ ಕೊಡುತ್ತವೆ. ನಂತರ ಅವುಗಳನ್ನು ಈಡೇರಿಸುವುದಿಲ್ಲ. ಈ ಪಕ್ಷ (ಬಿಜೆಪಿ) ಕೂಡಾ ಸಿಕ್ಕಾಪಟ್ಟೆ ಆಶ್ವಾಸನೆ ಕೊಟ್ಟಿತ್ತು. ಸ್ವಾಮಿನಾಥನ್ (2006) ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರ್ತೀವಿ ಎಂದು ಹೇಳಿದ್ದರು. ಆದರೆ ಅದನ್ನು ಈಡೇರಿಸಲಿಲ್ಲ. ಅಸಲಿಗೆ ಸುಳ್ಳು ಹೇಳಿದರು. ಪರವಾಗಿಲ್ಲ.
ಎಲ್ಲಾ ಸರ್ಕಾರಗಳು ಬಹಳಷ್ಟು ಸಾಧನೆ ಮಾಡಿರುವುದಾಗಿ ಹೇಳಿಕೊಳ್ಳುತ್ತವೆ. ನಮ್ಮ ಪ್ರಧಾನಿಗಳಂತೂ ಸ್ವಲ್ಪ ಜಾಸ್ತಿನೆ ದೊಡ್ಡದೊಡ್ಡ ಸಾಧನೆ ಹೇಳಿಕೊಳ್ತಾರೆ.. ಆದಾಯವನ್ನು ದುಪ್ಪಟ್ಟು ಮಾಡ್ತೀನಿ…
ದುಪ್ಪಟ್ಟು ಮಾಡುವ ಮಾತಿರಲಿ, ಆದರೆ ವಾಸ್ತವ ಏನೆಂದ್ರೆ, ನಮ್ಮ ದೇಶದ ರೈತನ ಸ್ಥಿತಿ ಐದು ವರ್ಷಗಳ ಹಿಂದೆ ಹೇಗಿತ್ತೊ ಈಗಲೂ ಹಾಗೆಯೇ ಇದೆ.. ಆದಾಯ ದುಪ್ಪಟ್ಟು ಅನ್ನೋದು ದಿಕ್ಕುದಿಸೆಯಿಲ್ಲದ ಮಾತಷ್ಟೆ..
ಅದನ್ನೂ ಬಿಟ್ಟು ಬಿಡೋಣ….
ನೀವು (ಸರ್ಕಾರ) ರೈತರು ಆತಂಕ ಮತ್ತು ಸಮಸ್ಯೆಗಳ ಸುಳಿಯಲ್ಲಿದ್ದಾಗ ಅವರ ನೆರವಿಗೆ ಬಂದಿರಾ? ಅಂಥಾ ಭಯಾನಕ ಕ್ಷಾಮ ಕಾಡಿದಾಗಲೂ ಅವರು ರೈತರಿಗೆ ನೆರವಾಗಲಿಲ್ಲ. ಬದಲಿಗೆ ಅಂಥಾ ಪರಿಸ್ಥಿಯಲ್ಲಿ ರೈತರ ಮೇಲೆ ಇನ್ನಷ್ಟು ಸಂಕಷ್ಟ ಹೇರಿದರು, ನೋಟ್ ಬ್ಯಾನ್ ಮೂಲಕ. ಆ ಏಟನ್ನು ನಮ್ಮ ರೈತರು ಇದುವರೆಗೆ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ.
ಬೀದಿ ಪಶುಗಳ ಸಮಸ್ಯೆಯನ್ನು ನಿರ್ಮಿಸಿದ್ದು ಅವರೇ. ನಮ್ಮ ರೈತರು ನೆರವಿಗಾಗಿ ಬೇಡುತ್ತಿದ್ದಾರೆ. ಬೇಸಾಯಕ್ಕೆ ಬೇಕಾದ ಕಚ್ಚಾ ವಸ್ತುಗಳ ಬೆಲೆ ಜಾಸ್ತಿಯಾಗಿದೆ.  ಅದು ರಸಗೊಬ್ಬರ ಇರಬಹುದು, ಡೀಸೆಲ್ ಇರಬಹುದು, ಎಲ್ಲವೂ ದುಬಾರಿಯಾಗಿವೆ.
ಇದಿಷ್ಟೇ ಅಲ್ಲದೇ, ರೈತರಿಂದ ಅವರ ಜಮೀನುಗಳನ್ನು ಕಸಿದುಕೊಳ್ಳುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ ಅಂತ ನನ್ನನ್ನು ಕೇಳ್ತಾರೆ?  
ನಾನು ಹೇಳ್ತೀನಿ, ಕಳೆದ 70 ವರ್ಷಗಳಲ್ಲಿ ಎಲ್ಲಾ ಸರ್ಕಾರಗಳು ರೈತರನ್ನು ನಿರ್ಲಕ್ಷಿಸುತ್ತಾ, ಅವರನ್ನು ಆಸ್ಪತ್ರೆಗಳ ಜನರಲ್ ವಾರ್ಡಿನ ಹಾಸಿಗೆ ಮೇಲೆ ರೋಗಿಗಳನ್ನಾಗಿಸುತ್ತಾ  ಬಂದಿದ್ದವು. ಮೋದಿ ಸರ್ಕಾರ ಅವರನ್ನು ಜನರಲ್ ವಾರ್ಡ್‍ನಿಂದ ಸೀದಾ ಐಸಿಯುಗೆ ತಂದು ಹಾಕಿದೆ.
ಇದು ಮೋದಿ ಸರ್ಕಾರದ ಸಾಧನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...