Homeಮುಖಪುಟಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

- Advertisement -
- Advertisement -

ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಘಡದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ರೈತರ ಸಮಸ್ಯೆ ಸಹ ಒಂದು ಮಹತ್ವದ ಅಂಶವಾಗಿತ್ತು ಎಂಬ ಮಾತುಗಳು ಕೇಳಿಬಂದಿವೆ. ಈಗ ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರ ರೈತರಿಗೆ ಕೊಟ್ಟಿದ್ದೇನು ಎಂಬುದನ್ನು ವಿಶ್ಲೇಷಿಸಿದ್ದಾರೆ ಎಐಕೆಎಸ್‍ಸಿಸಿ ರೈತ ಹೋರಾಟ ಸಮಿತಿಯ ಯೋಗೇಂದ್ರ ಯಾದವ್. ವಿಡಿಯೋ ನೋಡಿ

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?
ಕಳೆದ 70 ವರ್ಷಗಳಲ್ಲಿ ಯಾವ ಸರ್ಕಾರವು ರೈತಸ್ನೇಹಿಯಾಗಿ ಕೆಲಸ ಮಾಡಿಲ್ಲ. ಆದ್ರೆ ಅದೇ 70 ವರ್ಷದಲ್ಲಿ ಯಾವ ಸರ್ಕಾರವು ಇಷ್ಟು ಪ್ರಮಾಣದಲ್ಲಿ ರೈತದ್ರೋಹಿ ಆಗಿರಲಿಲ್ಲ.
ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸುಮಾರಷ್ಟು ಆಶ್ವಾಸನೆ ಕೊಡುತ್ತವೆ. ನಂತರ ಅವುಗಳನ್ನು ಈಡೇರಿಸುವುದಿಲ್ಲ. ಈ ಪಕ್ಷ (ಬಿಜೆಪಿ) ಕೂಡಾ ಸಿಕ್ಕಾಪಟ್ಟೆ ಆಶ್ವಾಸನೆ ಕೊಟ್ಟಿತ್ತು. ಸ್ವಾಮಿನಾಥನ್ (2006) ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರ್ತೀವಿ ಎಂದು ಹೇಳಿದ್ದರು. ಆದರೆ ಅದನ್ನು ಈಡೇರಿಸಲಿಲ್ಲ. ಅಸಲಿಗೆ ಸುಳ್ಳು ಹೇಳಿದರು. ಪರವಾಗಿಲ್ಲ.
ಎಲ್ಲಾ ಸರ್ಕಾರಗಳು ಬಹಳಷ್ಟು ಸಾಧನೆ ಮಾಡಿರುವುದಾಗಿ ಹೇಳಿಕೊಳ್ಳುತ್ತವೆ. ನಮ್ಮ ಪ್ರಧಾನಿಗಳಂತೂ ಸ್ವಲ್ಪ ಜಾಸ್ತಿನೆ ದೊಡ್ಡದೊಡ್ಡ ಸಾಧನೆ ಹೇಳಿಕೊಳ್ತಾರೆ.. ಆದಾಯವನ್ನು ದುಪ್ಪಟ್ಟು ಮಾಡ್ತೀನಿ…
ದುಪ್ಪಟ್ಟು ಮಾಡುವ ಮಾತಿರಲಿ, ಆದರೆ ವಾಸ್ತವ ಏನೆಂದ್ರೆ, ನಮ್ಮ ದೇಶದ ರೈತನ ಸ್ಥಿತಿ ಐದು ವರ್ಷಗಳ ಹಿಂದೆ ಹೇಗಿತ್ತೊ ಈಗಲೂ ಹಾಗೆಯೇ ಇದೆ.. ಆದಾಯ ದುಪ್ಪಟ್ಟು ಅನ್ನೋದು ದಿಕ್ಕುದಿಸೆಯಿಲ್ಲದ ಮಾತಷ್ಟೆ..
ಅದನ್ನೂ ಬಿಟ್ಟು ಬಿಡೋಣ….
ನೀವು (ಸರ್ಕಾರ) ರೈತರು ಆತಂಕ ಮತ್ತು ಸಮಸ್ಯೆಗಳ ಸುಳಿಯಲ್ಲಿದ್ದಾಗ ಅವರ ನೆರವಿಗೆ ಬಂದಿರಾ? ಅಂಥಾ ಭಯಾನಕ ಕ್ಷಾಮ ಕಾಡಿದಾಗಲೂ ಅವರು ರೈತರಿಗೆ ನೆರವಾಗಲಿಲ್ಲ. ಬದಲಿಗೆ ಅಂಥಾ ಪರಿಸ್ಥಿಯಲ್ಲಿ ರೈತರ ಮೇಲೆ ಇನ್ನಷ್ಟು ಸಂಕಷ್ಟ ಹೇರಿದರು, ನೋಟ್ ಬ್ಯಾನ್ ಮೂಲಕ. ಆ ಏಟನ್ನು ನಮ್ಮ ರೈತರು ಇದುವರೆಗೆ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ.
ಬೀದಿ ಪಶುಗಳ ಸಮಸ್ಯೆಯನ್ನು ನಿರ್ಮಿಸಿದ್ದು ಅವರೇ. ನಮ್ಮ ರೈತರು ನೆರವಿಗಾಗಿ ಬೇಡುತ್ತಿದ್ದಾರೆ. ಬೇಸಾಯಕ್ಕೆ ಬೇಕಾದ ಕಚ್ಚಾ ವಸ್ತುಗಳ ಬೆಲೆ ಜಾಸ್ತಿಯಾಗಿದೆ.  ಅದು ರಸಗೊಬ್ಬರ ಇರಬಹುದು, ಡೀಸೆಲ್ ಇರಬಹುದು, ಎಲ್ಲವೂ ದುಬಾರಿಯಾಗಿವೆ.
ಇದಿಷ್ಟೇ ಅಲ್ಲದೇ, ರೈತರಿಂದ ಅವರ ಜಮೀನುಗಳನ್ನು ಕಸಿದುಕೊಳ್ಳುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ ಅಂತ ನನ್ನನ್ನು ಕೇಳ್ತಾರೆ?  
ನಾನು ಹೇಳ್ತೀನಿ, ಕಳೆದ 70 ವರ್ಷಗಳಲ್ಲಿ ಎಲ್ಲಾ ಸರ್ಕಾರಗಳು ರೈತರನ್ನು ನಿರ್ಲಕ್ಷಿಸುತ್ತಾ, ಅವರನ್ನು ಆಸ್ಪತ್ರೆಗಳ ಜನರಲ್ ವಾರ್ಡಿನ ಹಾಸಿಗೆ ಮೇಲೆ ರೋಗಿಗಳನ್ನಾಗಿಸುತ್ತಾ  ಬಂದಿದ್ದವು. ಮೋದಿ ಸರ್ಕಾರ ಅವರನ್ನು ಜನರಲ್ ವಾರ್ಡ್‍ನಿಂದ ಸೀದಾ ಐಸಿಯುಗೆ ತಂದು ಹಾಕಿದೆ.
ಇದು ಮೋದಿ ಸರ್ಕಾರದ ಸಾಧನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...