Homeಮುಖಪುಟಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

- Advertisement -
- Advertisement -

ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಘಡದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ರೈತರ ಸಮಸ್ಯೆ ಸಹ ಒಂದು ಮಹತ್ವದ ಅಂಶವಾಗಿತ್ತು ಎಂಬ ಮಾತುಗಳು ಕೇಳಿಬಂದಿವೆ. ಈಗ ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರ ರೈತರಿಗೆ ಕೊಟ್ಟಿದ್ದೇನು ಎಂಬುದನ್ನು ವಿಶ್ಲೇಷಿಸಿದ್ದಾರೆ ಎಐಕೆಎಸ್‍ಸಿಸಿ ರೈತ ಹೋರಾಟ ಸಮಿತಿಯ ಯೋಗೇಂದ್ರ ಯಾದವ್. ವಿಡಿಯೋ ನೋಡಿ

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?
ಕಳೆದ 70 ವರ್ಷಗಳಲ್ಲಿ ಯಾವ ಸರ್ಕಾರವು ರೈತಸ್ನೇಹಿಯಾಗಿ ಕೆಲಸ ಮಾಡಿಲ್ಲ. ಆದ್ರೆ ಅದೇ 70 ವರ್ಷದಲ್ಲಿ ಯಾವ ಸರ್ಕಾರವು ಇಷ್ಟು ಪ್ರಮಾಣದಲ್ಲಿ ರೈತದ್ರೋಹಿ ಆಗಿರಲಿಲ್ಲ.
ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸುಮಾರಷ್ಟು ಆಶ್ವಾಸನೆ ಕೊಡುತ್ತವೆ. ನಂತರ ಅವುಗಳನ್ನು ಈಡೇರಿಸುವುದಿಲ್ಲ. ಈ ಪಕ್ಷ (ಬಿಜೆಪಿ) ಕೂಡಾ ಸಿಕ್ಕಾಪಟ್ಟೆ ಆಶ್ವಾಸನೆ ಕೊಟ್ಟಿತ್ತು. ಸ್ವಾಮಿನಾಥನ್ (2006) ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರ್ತೀವಿ ಎಂದು ಹೇಳಿದ್ದರು. ಆದರೆ ಅದನ್ನು ಈಡೇರಿಸಲಿಲ್ಲ. ಅಸಲಿಗೆ ಸುಳ್ಳು ಹೇಳಿದರು. ಪರವಾಗಿಲ್ಲ.
ಎಲ್ಲಾ ಸರ್ಕಾರಗಳು ಬಹಳಷ್ಟು ಸಾಧನೆ ಮಾಡಿರುವುದಾಗಿ ಹೇಳಿಕೊಳ್ಳುತ್ತವೆ. ನಮ್ಮ ಪ್ರಧಾನಿಗಳಂತೂ ಸ್ವಲ್ಪ ಜಾಸ್ತಿನೆ ದೊಡ್ಡದೊಡ್ಡ ಸಾಧನೆ ಹೇಳಿಕೊಳ್ತಾರೆ.. ಆದಾಯವನ್ನು ದುಪ್ಪಟ್ಟು ಮಾಡ್ತೀನಿ…
ದುಪ್ಪಟ್ಟು ಮಾಡುವ ಮಾತಿರಲಿ, ಆದರೆ ವಾಸ್ತವ ಏನೆಂದ್ರೆ, ನಮ್ಮ ದೇಶದ ರೈತನ ಸ್ಥಿತಿ ಐದು ವರ್ಷಗಳ ಹಿಂದೆ ಹೇಗಿತ್ತೊ ಈಗಲೂ ಹಾಗೆಯೇ ಇದೆ.. ಆದಾಯ ದುಪ್ಪಟ್ಟು ಅನ್ನೋದು ದಿಕ್ಕುದಿಸೆಯಿಲ್ಲದ ಮಾತಷ್ಟೆ..
ಅದನ್ನೂ ಬಿಟ್ಟು ಬಿಡೋಣ….
ನೀವು (ಸರ್ಕಾರ) ರೈತರು ಆತಂಕ ಮತ್ತು ಸಮಸ್ಯೆಗಳ ಸುಳಿಯಲ್ಲಿದ್ದಾಗ ಅವರ ನೆರವಿಗೆ ಬಂದಿರಾ? ಅಂಥಾ ಭಯಾನಕ ಕ್ಷಾಮ ಕಾಡಿದಾಗಲೂ ಅವರು ರೈತರಿಗೆ ನೆರವಾಗಲಿಲ್ಲ. ಬದಲಿಗೆ ಅಂಥಾ ಪರಿಸ್ಥಿಯಲ್ಲಿ ರೈತರ ಮೇಲೆ ಇನ್ನಷ್ಟು ಸಂಕಷ್ಟ ಹೇರಿದರು, ನೋಟ್ ಬ್ಯಾನ್ ಮೂಲಕ. ಆ ಏಟನ್ನು ನಮ್ಮ ರೈತರು ಇದುವರೆಗೆ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ.
ಬೀದಿ ಪಶುಗಳ ಸಮಸ್ಯೆಯನ್ನು ನಿರ್ಮಿಸಿದ್ದು ಅವರೇ. ನಮ್ಮ ರೈತರು ನೆರವಿಗಾಗಿ ಬೇಡುತ್ತಿದ್ದಾರೆ. ಬೇಸಾಯಕ್ಕೆ ಬೇಕಾದ ಕಚ್ಚಾ ವಸ್ತುಗಳ ಬೆಲೆ ಜಾಸ್ತಿಯಾಗಿದೆ.  ಅದು ರಸಗೊಬ್ಬರ ಇರಬಹುದು, ಡೀಸೆಲ್ ಇರಬಹುದು, ಎಲ್ಲವೂ ದುಬಾರಿಯಾಗಿವೆ.
ಇದಿಷ್ಟೇ ಅಲ್ಲದೇ, ರೈತರಿಂದ ಅವರ ಜಮೀನುಗಳನ್ನು ಕಸಿದುಕೊಳ್ಳುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ ಅಂತ ನನ್ನನ್ನು ಕೇಳ್ತಾರೆ?  
ನಾನು ಹೇಳ್ತೀನಿ, ಕಳೆದ 70 ವರ್ಷಗಳಲ್ಲಿ ಎಲ್ಲಾ ಸರ್ಕಾರಗಳು ರೈತರನ್ನು ನಿರ್ಲಕ್ಷಿಸುತ್ತಾ, ಅವರನ್ನು ಆಸ್ಪತ್ರೆಗಳ ಜನರಲ್ ವಾರ್ಡಿನ ಹಾಸಿಗೆ ಮೇಲೆ ರೋಗಿಗಳನ್ನಾಗಿಸುತ್ತಾ  ಬಂದಿದ್ದವು. ಮೋದಿ ಸರ್ಕಾರ ಅವರನ್ನು ಜನರಲ್ ವಾರ್ಡ್‍ನಿಂದ ಸೀದಾ ಐಸಿಯುಗೆ ತಂದು ಹಾಕಿದೆ.
ಇದು ಮೋದಿ ಸರ್ಕಾರದ ಸಾಧನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...