Homeಮುಖಪುಟಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

ಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

- Advertisement -
- Advertisement -

ಭಾರತದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ಕರೆಕೊಡುತ್ತಲೇ ಇದ್ದಾರೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಆ ಕಾರಣಕ್ಕಾಗಿ ಈಗ ಮತ್ತೆ ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚೀನೀ ಆಪ್ಗಳನ್ನು ಬಹಿಷ್ಕರಿಸುವಂತೆ ಅಭಿಯಾನವನ್ನೆ ನಡೆಸಲಾಗಿದೆ.

ಆದರೆ ಈಗ ಸ್ವತಃ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವೇ @mygovindia ಯೂಸರ್‌‌ ಐಡಿ ಇರುವ ಅಧಿಕೃತ ಟಿಕ್‌ಟಾಕ್‌ ಖಾತೆಯನ್ನು ತೆರೆದಿದ್ದು, ಬಹಿಷ್ಕಾರಕ್ಕೆ ಕರೆ ಕೊಟ್ಟಿದ್ದ ಬಿಜಿಪಿ ಅಭಿಮಾನಿಗಳು ಆಘಾತಕ್ಕಳಗಾಗಿದ್ದಾರೆ.

ಹೆಚ್ಚು ಸಾಮಾಜಿಕ ಜಾಲತಾಣ ಬಳಕೆದಾರರು ಟಿಕ್‌ಟಾಕ್‌ ಬಳಸುತ್ತಿರುವುದರಿಂದಾಗಿ, ಅದರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್‌ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಟಿಕ್‌ಟಾಕ್‌ ಖಾತೆ ರಚಿಸಿದೆ ಎಂದು ಹೇಳಲಾಗಿದೆ.


ಓದಿ: ಕೇರಳ ಗರ್ಭಿಣಿ ಆನೆಯ ಸಾವಿನ ಹೆಸರಲ್ಲಿ ಬಲಪಂಥೀಯರು ಹರಡಿದ್ದ ಎರಡು ದೊಡ್ಡ ಸುಳ್ಳುಗಳು


ಟಿಕ್‌ಟಾಕ್‌ನ ಪ್ರೊಫೈಲ್‌ “Citizen engagement platform of Government of India” (ನಾಗರಿಕರನ್ನು ಸಂಪರ್ಕಿಸುವ ಭಾರತ ಸರ್ಕಾರ ಸಾಮಾಜಿಕ ವೇದಿಕೆ) ಎಂದು ಅದು ಹೇಳಿಕೊಂಡಿದೆ.

ಟಿಕ್‌ಟಾಕ್‌ನಲ್ಲಿನ @mygovindia ಖಾತೆಯು ಸುಮಾರು 909.1 ಸಾವಿರ ಅನುಯಾಯಿಗಳನ್ನು ಹೊಂದಿದ್ದು, 6.5 ಮಿಲಿಯನ್ ಲೈಕ್‌ಗಳನ್ನು ಪಡೆದಿದೆ. ಅಲ್ಲದೆ ಅದು ಬೇರೆ ಯಾವುದೇ ಇತರ ಖಾತೆಗಳನ್ನು ಫಾಲೋ ಮಾಡುತ್ತಿಲ್ಲ. ಇಲ್ಲಿಯವರೆಗೂ ಆ ಖಾತೆಯಲ್ಲಿ ಯೋಗ, ಕೊರೊನಾ ಸೋಂಕು ಕುರಿತ ಜಾಗೃತಿ ಹಾಗೂ ಸರ್ಕಾರದ ಸಾಧನೆಗಳನ್ನು ಒಳಗೊಂಡ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

@mygovindia ಟಿಕ್‌ಟಾಕ್‌ ಖಾತೆಯನ್ನು ಪರಿಶೀಲಿಸಿ, ಬಳಕೆದಾರರ ಹೆಸರಿನೊಂದಿಗೆ ನೀಲಿ ಟಿಕ್‌ ಅನ್ನು ಟಿಕ್‌ಟಾಕ್‌ ನೀಡಿದೆ.

ಸರ್ಕಾರವು ಭಾರತೀಯರಿಗೆ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಪ್ರಾರಂಭಿಸಿ ಎಂದು ‘ಆತ್ಮಾ ನಿರ್ಭರ್’ ಆಗಲು ಕರೆಕೊಟ್ಟಿರುವ ಸಂದರ್ಭದಲ್ಲಿ ಈ ಸುದ್ದಿ ವಿಶೇಷವಾಗಿ ಜನರನ್ನು ಆಘಾತಕ್ಕೀಡು ಮಾಡಿದೆ.

ಅಲ್ಲದೆ, ಚೀನಾದ ಟಿಕ್‌ಟಾಕ್‌ ಬದಲಾಗಿ, ಭಾರತದ ಮಿತ್ರೋನ್‌ ಆಪ್‌ ಬಳಸುವಂತೆ ಕರೆಕೊಡಲಾಗಿತ್ತು. ಮಿತ್ರೋನ್‌ ಅಪ್ಲಿಕೇಷನ್‌ ಕೂಡ ಹೆಚ್ಚು ಡೌನ್‌ಲೋಡ್‌ ಆಗಿತ್ತು. ಆದರೆ, ಮಿತ್ರೋನ್‌ ಅಪ್ಲಿಕೇಷನ್ ಅನ್ನು ಪಾಕಿಸ್ಥಾನದ ಟಿಕ್‌ಟಿಕ್‌ ಆಪ್‌ನ ರೂಪಾಂತರವಾಗಿದ್ದು, ಅದೂ ಕೂಡ ಸ್ವದೇಶಿ ಅಲ್ಲ ಎಂದು ಫ್ಯಾಕ್‌ಚೆಕ್‌ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಅನೇಕ ಬಳಕೆದಾರರು ಸರ್ಕಾರದ ಬೂಟಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಟಿಕ್‌ಟಾಕ್ ಖಾತೆಯನ್ನು ಅಳಿಸಲು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಟ್ವಿಟ್ಟರಿನಲ್ಲಿ ಹಲವಾರು ನೆಟ್ಟಿಗರು ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...