Homeಮುಖಪುಟಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

ಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

- Advertisement -
- Advertisement -

ಭಾರತದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ಕರೆಕೊಡುತ್ತಲೇ ಇದ್ದಾರೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಆ ಕಾರಣಕ್ಕಾಗಿ ಈಗ ಮತ್ತೆ ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚೀನೀ ಆಪ್ಗಳನ್ನು ಬಹಿಷ್ಕರಿಸುವಂತೆ ಅಭಿಯಾನವನ್ನೆ ನಡೆಸಲಾಗಿದೆ.

ಆದರೆ ಈಗ ಸ್ವತಃ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವೇ @mygovindia ಯೂಸರ್‌‌ ಐಡಿ ಇರುವ ಅಧಿಕೃತ ಟಿಕ್‌ಟಾಕ್‌ ಖಾತೆಯನ್ನು ತೆರೆದಿದ್ದು, ಬಹಿಷ್ಕಾರಕ್ಕೆ ಕರೆ ಕೊಟ್ಟಿದ್ದ ಬಿಜಿಪಿ ಅಭಿಮಾನಿಗಳು ಆಘಾತಕ್ಕಳಗಾಗಿದ್ದಾರೆ.

ಹೆಚ್ಚು ಸಾಮಾಜಿಕ ಜಾಲತಾಣ ಬಳಕೆದಾರರು ಟಿಕ್‌ಟಾಕ್‌ ಬಳಸುತ್ತಿರುವುದರಿಂದಾಗಿ, ಅದರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್‌ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಟಿಕ್‌ಟಾಕ್‌ ಖಾತೆ ರಚಿಸಿದೆ ಎಂದು ಹೇಳಲಾಗಿದೆ.


ಓದಿ: ಕೇರಳ ಗರ್ಭಿಣಿ ಆನೆಯ ಸಾವಿನ ಹೆಸರಲ್ಲಿ ಬಲಪಂಥೀಯರು ಹರಡಿದ್ದ ಎರಡು ದೊಡ್ಡ ಸುಳ್ಳುಗಳು


ಟಿಕ್‌ಟಾಕ್‌ನ ಪ್ರೊಫೈಲ್‌ “Citizen engagement platform of Government of India” (ನಾಗರಿಕರನ್ನು ಸಂಪರ್ಕಿಸುವ ಭಾರತ ಸರ್ಕಾರ ಸಾಮಾಜಿಕ ವೇದಿಕೆ) ಎಂದು ಅದು ಹೇಳಿಕೊಂಡಿದೆ.

ಟಿಕ್‌ಟಾಕ್‌ನಲ್ಲಿನ @mygovindia ಖಾತೆಯು ಸುಮಾರು 909.1 ಸಾವಿರ ಅನುಯಾಯಿಗಳನ್ನು ಹೊಂದಿದ್ದು, 6.5 ಮಿಲಿಯನ್ ಲೈಕ್‌ಗಳನ್ನು ಪಡೆದಿದೆ. ಅಲ್ಲದೆ ಅದು ಬೇರೆ ಯಾವುದೇ ಇತರ ಖಾತೆಗಳನ್ನು ಫಾಲೋ ಮಾಡುತ್ತಿಲ್ಲ. ಇಲ್ಲಿಯವರೆಗೂ ಆ ಖಾತೆಯಲ್ಲಿ ಯೋಗ, ಕೊರೊನಾ ಸೋಂಕು ಕುರಿತ ಜಾಗೃತಿ ಹಾಗೂ ಸರ್ಕಾರದ ಸಾಧನೆಗಳನ್ನು ಒಳಗೊಂಡ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

@mygovindia ಟಿಕ್‌ಟಾಕ್‌ ಖಾತೆಯನ್ನು ಪರಿಶೀಲಿಸಿ, ಬಳಕೆದಾರರ ಹೆಸರಿನೊಂದಿಗೆ ನೀಲಿ ಟಿಕ್‌ ಅನ್ನು ಟಿಕ್‌ಟಾಕ್‌ ನೀಡಿದೆ.

ಸರ್ಕಾರವು ಭಾರತೀಯರಿಗೆ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಪ್ರಾರಂಭಿಸಿ ಎಂದು ‘ಆತ್ಮಾ ನಿರ್ಭರ್’ ಆಗಲು ಕರೆಕೊಟ್ಟಿರುವ ಸಂದರ್ಭದಲ್ಲಿ ಈ ಸುದ್ದಿ ವಿಶೇಷವಾಗಿ ಜನರನ್ನು ಆಘಾತಕ್ಕೀಡು ಮಾಡಿದೆ.

ಅಲ್ಲದೆ, ಚೀನಾದ ಟಿಕ್‌ಟಾಕ್‌ ಬದಲಾಗಿ, ಭಾರತದ ಮಿತ್ರೋನ್‌ ಆಪ್‌ ಬಳಸುವಂತೆ ಕರೆಕೊಡಲಾಗಿತ್ತು. ಮಿತ್ರೋನ್‌ ಅಪ್ಲಿಕೇಷನ್‌ ಕೂಡ ಹೆಚ್ಚು ಡೌನ್‌ಲೋಡ್‌ ಆಗಿತ್ತು. ಆದರೆ, ಮಿತ್ರೋನ್‌ ಅಪ್ಲಿಕೇಷನ್ ಅನ್ನು ಪಾಕಿಸ್ಥಾನದ ಟಿಕ್‌ಟಿಕ್‌ ಆಪ್‌ನ ರೂಪಾಂತರವಾಗಿದ್ದು, ಅದೂ ಕೂಡ ಸ್ವದೇಶಿ ಅಲ್ಲ ಎಂದು ಫ್ಯಾಕ್‌ಚೆಕ್‌ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಅನೇಕ ಬಳಕೆದಾರರು ಸರ್ಕಾರದ ಬೂಟಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಟಿಕ್‌ಟಾಕ್ ಖಾತೆಯನ್ನು ಅಳಿಸಲು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಟ್ವಿಟ್ಟರಿನಲ್ಲಿ ಹಲವಾರು ನೆಟ್ಟಿಗರು ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...