Homeಮುಖಪುಟಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

ಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

- Advertisement -
- Advertisement -

ಭಾರತದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ಕರೆಕೊಡುತ್ತಲೇ ಇದ್ದಾರೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಆ ಕಾರಣಕ್ಕಾಗಿ ಈಗ ಮತ್ತೆ ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚೀನೀ ಆಪ್ಗಳನ್ನು ಬಹಿಷ್ಕರಿಸುವಂತೆ ಅಭಿಯಾನವನ್ನೆ ನಡೆಸಲಾಗಿದೆ.

ಆದರೆ ಈಗ ಸ್ವತಃ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವೇ @mygovindia ಯೂಸರ್‌‌ ಐಡಿ ಇರುವ ಅಧಿಕೃತ ಟಿಕ್‌ಟಾಕ್‌ ಖಾತೆಯನ್ನು ತೆರೆದಿದ್ದು, ಬಹಿಷ್ಕಾರಕ್ಕೆ ಕರೆ ಕೊಟ್ಟಿದ್ದ ಬಿಜಿಪಿ ಅಭಿಮಾನಿಗಳು ಆಘಾತಕ್ಕಳಗಾಗಿದ್ದಾರೆ.

ಹೆಚ್ಚು ಸಾಮಾಜಿಕ ಜಾಲತಾಣ ಬಳಕೆದಾರರು ಟಿಕ್‌ಟಾಕ್‌ ಬಳಸುತ್ತಿರುವುದರಿಂದಾಗಿ, ಅದರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್‌ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಟಿಕ್‌ಟಾಕ್‌ ಖಾತೆ ರಚಿಸಿದೆ ಎಂದು ಹೇಳಲಾಗಿದೆ.


ಓದಿ: ಕೇರಳ ಗರ್ಭಿಣಿ ಆನೆಯ ಸಾವಿನ ಹೆಸರಲ್ಲಿ ಬಲಪಂಥೀಯರು ಹರಡಿದ್ದ ಎರಡು ದೊಡ್ಡ ಸುಳ್ಳುಗಳು


ಟಿಕ್‌ಟಾಕ್‌ನ ಪ್ರೊಫೈಲ್‌ “Citizen engagement platform of Government of India” (ನಾಗರಿಕರನ್ನು ಸಂಪರ್ಕಿಸುವ ಭಾರತ ಸರ್ಕಾರ ಸಾಮಾಜಿಕ ವೇದಿಕೆ) ಎಂದು ಅದು ಹೇಳಿಕೊಂಡಿದೆ.

ಟಿಕ್‌ಟಾಕ್‌ನಲ್ಲಿನ @mygovindia ಖಾತೆಯು ಸುಮಾರು 909.1 ಸಾವಿರ ಅನುಯಾಯಿಗಳನ್ನು ಹೊಂದಿದ್ದು, 6.5 ಮಿಲಿಯನ್ ಲೈಕ್‌ಗಳನ್ನು ಪಡೆದಿದೆ. ಅಲ್ಲದೆ ಅದು ಬೇರೆ ಯಾವುದೇ ಇತರ ಖಾತೆಗಳನ್ನು ಫಾಲೋ ಮಾಡುತ್ತಿಲ್ಲ. ಇಲ್ಲಿಯವರೆಗೂ ಆ ಖಾತೆಯಲ್ಲಿ ಯೋಗ, ಕೊರೊನಾ ಸೋಂಕು ಕುರಿತ ಜಾಗೃತಿ ಹಾಗೂ ಸರ್ಕಾರದ ಸಾಧನೆಗಳನ್ನು ಒಳಗೊಂಡ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

@mygovindia ಟಿಕ್‌ಟಾಕ್‌ ಖಾತೆಯನ್ನು ಪರಿಶೀಲಿಸಿ, ಬಳಕೆದಾರರ ಹೆಸರಿನೊಂದಿಗೆ ನೀಲಿ ಟಿಕ್‌ ಅನ್ನು ಟಿಕ್‌ಟಾಕ್‌ ನೀಡಿದೆ.

ಸರ್ಕಾರವು ಭಾರತೀಯರಿಗೆ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಪ್ರಾರಂಭಿಸಿ ಎಂದು ‘ಆತ್ಮಾ ನಿರ್ಭರ್’ ಆಗಲು ಕರೆಕೊಟ್ಟಿರುವ ಸಂದರ್ಭದಲ್ಲಿ ಈ ಸುದ್ದಿ ವಿಶೇಷವಾಗಿ ಜನರನ್ನು ಆಘಾತಕ್ಕೀಡು ಮಾಡಿದೆ.

ಅಲ್ಲದೆ, ಚೀನಾದ ಟಿಕ್‌ಟಾಕ್‌ ಬದಲಾಗಿ, ಭಾರತದ ಮಿತ್ರೋನ್‌ ಆಪ್‌ ಬಳಸುವಂತೆ ಕರೆಕೊಡಲಾಗಿತ್ತು. ಮಿತ್ರೋನ್‌ ಅಪ್ಲಿಕೇಷನ್‌ ಕೂಡ ಹೆಚ್ಚು ಡೌನ್‌ಲೋಡ್‌ ಆಗಿತ್ತು. ಆದರೆ, ಮಿತ್ರೋನ್‌ ಅಪ್ಲಿಕೇಷನ್ ಅನ್ನು ಪಾಕಿಸ್ಥಾನದ ಟಿಕ್‌ಟಿಕ್‌ ಆಪ್‌ನ ರೂಪಾಂತರವಾಗಿದ್ದು, ಅದೂ ಕೂಡ ಸ್ವದೇಶಿ ಅಲ್ಲ ಎಂದು ಫ್ಯಾಕ್‌ಚೆಕ್‌ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಅನೇಕ ಬಳಕೆದಾರರು ಸರ್ಕಾರದ ಬೂಟಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಟಿಕ್‌ಟಾಕ್ ಖಾತೆಯನ್ನು ಅಳಿಸಲು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಟ್ವಿಟ್ಟರಿನಲ್ಲಿ ಹಲವಾರು ನೆಟ್ಟಿಗರು ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...