Homeಮುಖಪುಟಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

ಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

- Advertisement -
- Advertisement -

ಭಾರತದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ಕರೆಕೊಡುತ್ತಲೇ ಇದ್ದಾರೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಆ ಕಾರಣಕ್ಕಾಗಿ ಈಗ ಮತ್ತೆ ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚೀನೀ ಆಪ್ಗಳನ್ನು ಬಹಿಷ್ಕರಿಸುವಂತೆ ಅಭಿಯಾನವನ್ನೆ ನಡೆಸಲಾಗಿದೆ.

ಆದರೆ ಈಗ ಸ್ವತಃ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವೇ @mygovindia ಯೂಸರ್‌‌ ಐಡಿ ಇರುವ ಅಧಿಕೃತ ಟಿಕ್‌ಟಾಕ್‌ ಖಾತೆಯನ್ನು ತೆರೆದಿದ್ದು, ಬಹಿಷ್ಕಾರಕ್ಕೆ ಕರೆ ಕೊಟ್ಟಿದ್ದ ಬಿಜಿಪಿ ಅಭಿಮಾನಿಗಳು ಆಘಾತಕ್ಕಳಗಾಗಿದ್ದಾರೆ.

ಹೆಚ್ಚು ಸಾಮಾಜಿಕ ಜಾಲತಾಣ ಬಳಕೆದಾರರು ಟಿಕ್‌ಟಾಕ್‌ ಬಳಸುತ್ತಿರುವುದರಿಂದಾಗಿ, ಅದರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್‌ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಟಿಕ್‌ಟಾಕ್‌ ಖಾತೆ ರಚಿಸಿದೆ ಎಂದು ಹೇಳಲಾಗಿದೆ.


ಓದಿ: ಕೇರಳ ಗರ್ಭಿಣಿ ಆನೆಯ ಸಾವಿನ ಹೆಸರಲ್ಲಿ ಬಲಪಂಥೀಯರು ಹರಡಿದ್ದ ಎರಡು ದೊಡ್ಡ ಸುಳ್ಳುಗಳು


ಟಿಕ್‌ಟಾಕ್‌ನ ಪ್ರೊಫೈಲ್‌ “Citizen engagement platform of Government of India” (ನಾಗರಿಕರನ್ನು ಸಂಪರ್ಕಿಸುವ ಭಾರತ ಸರ್ಕಾರ ಸಾಮಾಜಿಕ ವೇದಿಕೆ) ಎಂದು ಅದು ಹೇಳಿಕೊಂಡಿದೆ.

ಟಿಕ್‌ಟಾಕ್‌ನಲ್ಲಿನ @mygovindia ಖಾತೆಯು ಸುಮಾರು 909.1 ಸಾವಿರ ಅನುಯಾಯಿಗಳನ್ನು ಹೊಂದಿದ್ದು, 6.5 ಮಿಲಿಯನ್ ಲೈಕ್‌ಗಳನ್ನು ಪಡೆದಿದೆ. ಅಲ್ಲದೆ ಅದು ಬೇರೆ ಯಾವುದೇ ಇತರ ಖಾತೆಗಳನ್ನು ಫಾಲೋ ಮಾಡುತ್ತಿಲ್ಲ. ಇಲ್ಲಿಯವರೆಗೂ ಆ ಖಾತೆಯಲ್ಲಿ ಯೋಗ, ಕೊರೊನಾ ಸೋಂಕು ಕುರಿತ ಜಾಗೃತಿ ಹಾಗೂ ಸರ್ಕಾರದ ಸಾಧನೆಗಳನ್ನು ಒಳಗೊಂಡ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

@mygovindia ಟಿಕ್‌ಟಾಕ್‌ ಖಾತೆಯನ್ನು ಪರಿಶೀಲಿಸಿ, ಬಳಕೆದಾರರ ಹೆಸರಿನೊಂದಿಗೆ ನೀಲಿ ಟಿಕ್‌ ಅನ್ನು ಟಿಕ್‌ಟಾಕ್‌ ನೀಡಿದೆ.

ಸರ್ಕಾರವು ಭಾರತೀಯರಿಗೆ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಪ್ರಾರಂಭಿಸಿ ಎಂದು ‘ಆತ್ಮಾ ನಿರ್ಭರ್’ ಆಗಲು ಕರೆಕೊಟ್ಟಿರುವ ಸಂದರ್ಭದಲ್ಲಿ ಈ ಸುದ್ದಿ ವಿಶೇಷವಾಗಿ ಜನರನ್ನು ಆಘಾತಕ್ಕೀಡು ಮಾಡಿದೆ.

ಅಲ್ಲದೆ, ಚೀನಾದ ಟಿಕ್‌ಟಾಕ್‌ ಬದಲಾಗಿ, ಭಾರತದ ಮಿತ್ರೋನ್‌ ಆಪ್‌ ಬಳಸುವಂತೆ ಕರೆಕೊಡಲಾಗಿತ್ತು. ಮಿತ್ರೋನ್‌ ಅಪ್ಲಿಕೇಷನ್‌ ಕೂಡ ಹೆಚ್ಚು ಡೌನ್‌ಲೋಡ್‌ ಆಗಿತ್ತು. ಆದರೆ, ಮಿತ್ರೋನ್‌ ಅಪ್ಲಿಕೇಷನ್ ಅನ್ನು ಪಾಕಿಸ್ಥಾನದ ಟಿಕ್‌ಟಿಕ್‌ ಆಪ್‌ನ ರೂಪಾಂತರವಾಗಿದ್ದು, ಅದೂ ಕೂಡ ಸ್ವದೇಶಿ ಅಲ್ಲ ಎಂದು ಫ್ಯಾಕ್‌ಚೆಕ್‌ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಅನೇಕ ಬಳಕೆದಾರರು ಸರ್ಕಾರದ ಬೂಟಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಟಿಕ್‌ಟಾಕ್ ಖಾತೆಯನ್ನು ಅಳಿಸಲು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಟ್ವಿಟ್ಟರಿನಲ್ಲಿ ಹಲವಾರು ನೆಟ್ಟಿಗರು ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...