Homeಮುಖಪುಟಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

ಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

- Advertisement -
- Advertisement -

ಭಾರತದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ಕರೆಕೊಡುತ್ತಲೇ ಇದ್ದಾರೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಆ ಕಾರಣಕ್ಕಾಗಿ ಈಗ ಮತ್ತೆ ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚೀನೀ ಆಪ್ಗಳನ್ನು ಬಹಿಷ್ಕರಿಸುವಂತೆ ಅಭಿಯಾನವನ್ನೆ ನಡೆಸಲಾಗಿದೆ.

ಆದರೆ ಈಗ ಸ್ವತಃ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವೇ @mygovindia ಯೂಸರ್‌‌ ಐಡಿ ಇರುವ ಅಧಿಕೃತ ಟಿಕ್‌ಟಾಕ್‌ ಖಾತೆಯನ್ನು ತೆರೆದಿದ್ದು, ಬಹಿಷ್ಕಾರಕ್ಕೆ ಕರೆ ಕೊಟ್ಟಿದ್ದ ಬಿಜಿಪಿ ಅಭಿಮಾನಿಗಳು ಆಘಾತಕ್ಕಳಗಾಗಿದ್ದಾರೆ.

ಹೆಚ್ಚು ಸಾಮಾಜಿಕ ಜಾಲತಾಣ ಬಳಕೆದಾರರು ಟಿಕ್‌ಟಾಕ್‌ ಬಳಸುತ್ತಿರುವುದರಿಂದಾಗಿ, ಅದರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್‌ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಟಿಕ್‌ಟಾಕ್‌ ಖಾತೆ ರಚಿಸಿದೆ ಎಂದು ಹೇಳಲಾಗಿದೆ.


ಓದಿ: ಕೇರಳ ಗರ್ಭಿಣಿ ಆನೆಯ ಸಾವಿನ ಹೆಸರಲ್ಲಿ ಬಲಪಂಥೀಯರು ಹರಡಿದ್ದ ಎರಡು ದೊಡ್ಡ ಸುಳ್ಳುಗಳು


ಟಿಕ್‌ಟಾಕ್‌ನ ಪ್ರೊಫೈಲ್‌ “Citizen engagement platform of Government of India” (ನಾಗರಿಕರನ್ನು ಸಂಪರ್ಕಿಸುವ ಭಾರತ ಸರ್ಕಾರ ಸಾಮಾಜಿಕ ವೇದಿಕೆ) ಎಂದು ಅದು ಹೇಳಿಕೊಂಡಿದೆ.

ಟಿಕ್‌ಟಾಕ್‌ನಲ್ಲಿನ @mygovindia ಖಾತೆಯು ಸುಮಾರು 909.1 ಸಾವಿರ ಅನುಯಾಯಿಗಳನ್ನು ಹೊಂದಿದ್ದು, 6.5 ಮಿಲಿಯನ್ ಲೈಕ್‌ಗಳನ್ನು ಪಡೆದಿದೆ. ಅಲ್ಲದೆ ಅದು ಬೇರೆ ಯಾವುದೇ ಇತರ ಖಾತೆಗಳನ್ನು ಫಾಲೋ ಮಾಡುತ್ತಿಲ್ಲ. ಇಲ್ಲಿಯವರೆಗೂ ಆ ಖಾತೆಯಲ್ಲಿ ಯೋಗ, ಕೊರೊನಾ ಸೋಂಕು ಕುರಿತ ಜಾಗೃತಿ ಹಾಗೂ ಸರ್ಕಾರದ ಸಾಧನೆಗಳನ್ನು ಒಳಗೊಂಡ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

@mygovindia ಟಿಕ್‌ಟಾಕ್‌ ಖಾತೆಯನ್ನು ಪರಿಶೀಲಿಸಿ, ಬಳಕೆದಾರರ ಹೆಸರಿನೊಂದಿಗೆ ನೀಲಿ ಟಿಕ್‌ ಅನ್ನು ಟಿಕ್‌ಟಾಕ್‌ ನೀಡಿದೆ.

ಸರ್ಕಾರವು ಭಾರತೀಯರಿಗೆ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಪ್ರಾರಂಭಿಸಿ ಎಂದು ‘ಆತ್ಮಾ ನಿರ್ಭರ್’ ಆಗಲು ಕರೆಕೊಟ್ಟಿರುವ ಸಂದರ್ಭದಲ್ಲಿ ಈ ಸುದ್ದಿ ವಿಶೇಷವಾಗಿ ಜನರನ್ನು ಆಘಾತಕ್ಕೀಡು ಮಾಡಿದೆ.

ಅಲ್ಲದೆ, ಚೀನಾದ ಟಿಕ್‌ಟಾಕ್‌ ಬದಲಾಗಿ, ಭಾರತದ ಮಿತ್ರೋನ್‌ ಆಪ್‌ ಬಳಸುವಂತೆ ಕರೆಕೊಡಲಾಗಿತ್ತು. ಮಿತ್ರೋನ್‌ ಅಪ್ಲಿಕೇಷನ್‌ ಕೂಡ ಹೆಚ್ಚು ಡೌನ್‌ಲೋಡ್‌ ಆಗಿತ್ತು. ಆದರೆ, ಮಿತ್ರೋನ್‌ ಅಪ್ಲಿಕೇಷನ್ ಅನ್ನು ಪಾಕಿಸ್ಥಾನದ ಟಿಕ್‌ಟಿಕ್‌ ಆಪ್‌ನ ರೂಪಾಂತರವಾಗಿದ್ದು, ಅದೂ ಕೂಡ ಸ್ವದೇಶಿ ಅಲ್ಲ ಎಂದು ಫ್ಯಾಕ್‌ಚೆಕ್‌ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಅನೇಕ ಬಳಕೆದಾರರು ಸರ್ಕಾರದ ಬೂಟಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಟಿಕ್‌ಟಾಕ್ ಖಾತೆಯನ್ನು ಅಳಿಸಲು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಟ್ವಿಟ್ಟರಿನಲ್ಲಿ ಹಲವಾರು ನೆಟ್ಟಿಗರು ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...