Homeಮುಖಪುಟಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

ಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

- Advertisement -
- Advertisement -

ಭಾರತದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ಕರೆಕೊಡುತ್ತಲೇ ಇದ್ದಾರೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಆ ಕಾರಣಕ್ಕಾಗಿ ಈಗ ಮತ್ತೆ ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚೀನೀ ಆಪ್ಗಳನ್ನು ಬಹಿಷ್ಕರಿಸುವಂತೆ ಅಭಿಯಾನವನ್ನೆ ನಡೆಸಲಾಗಿದೆ.

ಆದರೆ ಈಗ ಸ್ವತಃ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವೇ @mygovindia ಯೂಸರ್‌‌ ಐಡಿ ಇರುವ ಅಧಿಕೃತ ಟಿಕ್‌ಟಾಕ್‌ ಖಾತೆಯನ್ನು ತೆರೆದಿದ್ದು, ಬಹಿಷ್ಕಾರಕ್ಕೆ ಕರೆ ಕೊಟ್ಟಿದ್ದ ಬಿಜಿಪಿ ಅಭಿಮಾನಿಗಳು ಆಘಾತಕ್ಕಳಗಾಗಿದ್ದಾರೆ.

ಹೆಚ್ಚು ಸಾಮಾಜಿಕ ಜಾಲತಾಣ ಬಳಕೆದಾರರು ಟಿಕ್‌ಟಾಕ್‌ ಬಳಸುತ್ತಿರುವುದರಿಂದಾಗಿ, ಅದರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್‌ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಟಿಕ್‌ಟಾಕ್‌ ಖಾತೆ ರಚಿಸಿದೆ ಎಂದು ಹೇಳಲಾಗಿದೆ.


ಓದಿ: ಕೇರಳ ಗರ್ಭಿಣಿ ಆನೆಯ ಸಾವಿನ ಹೆಸರಲ್ಲಿ ಬಲಪಂಥೀಯರು ಹರಡಿದ್ದ ಎರಡು ದೊಡ್ಡ ಸುಳ್ಳುಗಳು


ಟಿಕ್‌ಟಾಕ್‌ನ ಪ್ರೊಫೈಲ್‌ “Citizen engagement platform of Government of India” (ನಾಗರಿಕರನ್ನು ಸಂಪರ್ಕಿಸುವ ಭಾರತ ಸರ್ಕಾರ ಸಾಮಾಜಿಕ ವೇದಿಕೆ) ಎಂದು ಅದು ಹೇಳಿಕೊಂಡಿದೆ.

ಟಿಕ್‌ಟಾಕ್‌ನಲ್ಲಿನ @mygovindia ಖಾತೆಯು ಸುಮಾರು 909.1 ಸಾವಿರ ಅನುಯಾಯಿಗಳನ್ನು ಹೊಂದಿದ್ದು, 6.5 ಮಿಲಿಯನ್ ಲೈಕ್‌ಗಳನ್ನು ಪಡೆದಿದೆ. ಅಲ್ಲದೆ ಅದು ಬೇರೆ ಯಾವುದೇ ಇತರ ಖಾತೆಗಳನ್ನು ಫಾಲೋ ಮಾಡುತ್ತಿಲ್ಲ. ಇಲ್ಲಿಯವರೆಗೂ ಆ ಖಾತೆಯಲ್ಲಿ ಯೋಗ, ಕೊರೊನಾ ಸೋಂಕು ಕುರಿತ ಜಾಗೃತಿ ಹಾಗೂ ಸರ್ಕಾರದ ಸಾಧನೆಗಳನ್ನು ಒಳಗೊಂಡ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

@mygovindia ಟಿಕ್‌ಟಾಕ್‌ ಖಾತೆಯನ್ನು ಪರಿಶೀಲಿಸಿ, ಬಳಕೆದಾರರ ಹೆಸರಿನೊಂದಿಗೆ ನೀಲಿ ಟಿಕ್‌ ಅನ್ನು ಟಿಕ್‌ಟಾಕ್‌ ನೀಡಿದೆ.

ಸರ್ಕಾರವು ಭಾರತೀಯರಿಗೆ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಪ್ರಾರಂಭಿಸಿ ಎಂದು ‘ಆತ್ಮಾ ನಿರ್ಭರ್’ ಆಗಲು ಕರೆಕೊಟ್ಟಿರುವ ಸಂದರ್ಭದಲ್ಲಿ ಈ ಸುದ್ದಿ ವಿಶೇಷವಾಗಿ ಜನರನ್ನು ಆಘಾತಕ್ಕೀಡು ಮಾಡಿದೆ.

ಅಲ್ಲದೆ, ಚೀನಾದ ಟಿಕ್‌ಟಾಕ್‌ ಬದಲಾಗಿ, ಭಾರತದ ಮಿತ್ರೋನ್‌ ಆಪ್‌ ಬಳಸುವಂತೆ ಕರೆಕೊಡಲಾಗಿತ್ತು. ಮಿತ್ರೋನ್‌ ಅಪ್ಲಿಕೇಷನ್‌ ಕೂಡ ಹೆಚ್ಚು ಡೌನ್‌ಲೋಡ್‌ ಆಗಿತ್ತು. ಆದರೆ, ಮಿತ್ರೋನ್‌ ಅಪ್ಲಿಕೇಷನ್ ಅನ್ನು ಪಾಕಿಸ್ಥಾನದ ಟಿಕ್‌ಟಿಕ್‌ ಆಪ್‌ನ ರೂಪಾಂತರವಾಗಿದ್ದು, ಅದೂ ಕೂಡ ಸ್ವದೇಶಿ ಅಲ್ಲ ಎಂದು ಫ್ಯಾಕ್‌ಚೆಕ್‌ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಅನೇಕ ಬಳಕೆದಾರರು ಸರ್ಕಾರದ ಬೂಟಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಟಿಕ್‌ಟಾಕ್ ಖಾತೆಯನ್ನು ಅಳಿಸಲು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಟ್ವಿಟ್ಟರಿನಲ್ಲಿ ಹಲವಾರು ನೆಟ್ಟಿಗರು ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...