Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...