Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...