Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...