Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...