Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...