Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...