Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...