Homeಕರ್ನಾಟಕನರೇಂದ್ರ ಮೋದಿಯೇ ದೇಶದ್ರೋಹಿ-ಕೇಂದ್ರ ಸರ್ಕಾರದ ದಬ್ಬಾಳಿಕೆ ನಿಲ್ಲಲಿ

ನರೇಂದ್ರ ಮೋದಿಯೇ ದೇಶದ್ರೋಹಿ-ಕೇಂದ್ರ ಸರ್ಕಾರದ ದಬ್ಬಾಳಿಕೆ ನಿಲ್ಲಲಿ

- Advertisement -
- Advertisement -

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಭಾಗವಾಗಿ ಫೆಬ್ರವರಿ 6 ರಂದು ಹಮ್ಮಿಕೊಂಡಿದ್ದ ಚಕ್ಕಾ ಜಾಮ್ ಬೆಂಬಲಿಸಿ ತುಮಕೂರಿನಲ್ಲಿ ರಾಜ್ಯ ರೈತ ಸಂಘಟನೆಗಳ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು. ರಸ್ತೆ ತಡೆಗೆ ಇಳಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಆಗ ಪೊಲೀಸರು ಮತ್ತು ಪ್ರತಿಭಟನ ನಿರತರ ನಡುವೆ ವಾಗ್ವಾದ ನಡೆದಿದೆ.

ಬಂಧಿತ ಪ್ರತಿಭಟನಾಕಾರರನ್ನು ಪೊಲೀಸರು ಚಿಲುಮೆ ಸಮುದಾಯ ಭವನದ ಆವರಣದಲ್ಲಿ ಇಟ್ಟರು. ಅಲ್ಲಿಯೇ ಧರಣಿ ಕುಳಿತ ಪ್ರತಿಭಟನಾಕಾರರು ಪೊಲೀಸರು ಶಾಂತಿಯುತ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ. ಇದು ಖಂಡನೀಯ ಎಂದು ಕಿಡಿಕಾರಿದರು. ಮೂರು ಗಂಟೆಗಳ ಕಾಲ ಚಿಲುಮೆ ಸಮುದಾಯ ಭವನ ಆವರಣದಲ್ಲಿಯೇ ಧರಣಿ ನಡೆಸಿದ ಪ್ರತಿಭಟನಾಕಾರರು ಪೊಲೀಸರ ಕ್ರಮವನ್ನು ಖಂಡಿಸಿದರು. ರೈತರೊಂದಿಗೆ ಗೌರವ ಮತ್ತು ಪ್ರೀತಿಯಿಂದ ನಡೆದುಕೊಳ್ಳದೆ ದೌರ್ಜನ್ಯ ನಡೆಸಲು ಕುಮ್ಮಕ್ಕು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಿಜವಾದ ದೇಶದ್ರೋಹಿ. ಸರ್ಕಾರ ದೇಶದ್ರೋಹ ಕೃತ್ಯದಲ್ಲಿ ತೊಡಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ದಲಿತ ಸಂಘರ್ಷ ಸಮಿತಿ, ರೈತ-ಕೂಲಿಕಾರರ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಎಐಟಿಯುಸಿ, ಎಐಡಿಎಸ್ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು. ಸರ್ಕಾರ ದಬ್ಬಾಳಿಕೆ ಮಾಡಿ ರೈತ ಚಳವಳಿಯನ್ನು ಬಗ್ಗುಬಡಿಯಲು ಯತ್ನಿಸುತ್ತಿದೆ. ರೈತರ ಮೇಲೆ ದಾಳಿ ನಡೆಸುತ್ತಿದೆ. ನೆಪಮಾತ್ರಕ್ಕೆ ಮಾತುಕತೆಗೆ ಕರೆಯುತ್ತಿದೆ. ಕೇಂದ್ರ ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, “ರಾಷ್ಟ್ರಮಟ್ಟದ ಕರೆಗೆ ಓಗೊಟ್ಟಿದ್ದೇವೆ. ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಲಿಲ್ಲ. ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಸರ್ಕಾರ ನಮ್ಮ ಮಾತಿಗೆ ಬೆಲೆ ಕೊಡುತ್ತಿಲ್ಲ. ಬಜೆಟ್‌ನಲ್ಲೂ ರೈತರಿಗೆ ಪರಿಹಾರ ನೀಡಿಲ್ಲ. ವೈಜ್ಞಾನಿಕ ಬೆಂಬಲ ಬೆಲೆ, ಸ್ವಾಮಿನಾಥನ್ ವರದಿ ಬಗ್ಗೆ ಪ್ರಸ್ತಾಪವಿಲ್ಲ. ಅಷ್ಟೇ ಅಲ್ಲ ನೀರಾವರಿಗೂ ಹಣ ಮೀಸಲಿಟ್ಟಿಲ್ಲ. ಇದು ರೈತರಿಗೆ ಅಪಾಯದ ಕರೆಗಂಟೆಯಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಎಳೆದಾಡಿ ಬಂಧನ ಮಾಡಿದೆ. ಪೊಲೀಸರ ಕ್ರಮ ಖಂಡನೀಯ” ಎಂದರು.

“ದೇಶದಲ್ಲಿ ಸರ್ಕಾರಗಳು ಚಳವಳಿಯನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟರೆ ಅದು ಜನಾಂದೋಲನವಾಗಿ ರೂಪುಗೊಳ್ಳಲಿದೆ. ಹಳ್ಳಿಹಳ್ಳಿಗಳಿಂದಲೂ ರೈತರು ಜನಸಾಮಾನ್ಯರು ಎದ್ದು ಬರಲಿದ್ದಾರೆ ಎಂಬ ಎಚ್ಚರ ಸರ್ಕಾರಕ್ಕೆ ಇದ್ದರೆ ಒಳ್ಳೆಯದು. ಇಲ್ಲದಿದ್ದರೆ ಸರ್ಕಾರ ರೈತರ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಾಗೆಯೇ ಬಂಧಿತ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಹೋರಾಟನಿರತ ರೈತರ ಮೇಲೆ ಹಾಕಿರುವ ದೇಶದ್ರೋಹ, ಕೊಲೆಯತ್ನ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ನಾವು ರೈತರನ್ನು ಬೆಂಬಲಿಸಬೇಕು, ಏಕೆಂದರೆ… – ನಿರ್ದೇಶಕ ಪ. ರಂಜಿತ್ ಟ್ವೀಟ್

ಆರ್.ಕೆ.ಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ ಮಾತನಾಡಿ, “ರೈತರ ಬದುಕು ದುಸ್ಥರವಾಗಿದೆ. ಕೃಷಿ ಕಾಯ್ದೆಗಳು ಜಾರಿಗೊಂಡರೆ ರೈತರು, ಗ್ರಾಹಕರು, ಜನಸಾಮಾನ್ಯರು ಬದುಕು ತೀವ್ರ ಅಸ್ತವ್ಯಸ್ತಗೊಳ್ಳುತ್ತದೆ. ಕೃಷಿ ಕಾರ್ಪೋರೇಟ್ ಕುಳಗಳ ಹಿಡಿತಕ್ಕೆ ಸಿಕ್ಕಿ ಶೋಷಣೆ ಹೆಚ್ಚುತ್ತದೆ. ಆಹಾರದ ಕೊರತೆ ಹೆಚ್ಚಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ, “ಇಂದಿರಾಗಾಂಧಿ, ಮನಮೋಹನ್ ಸಿಂಗ್, ವಾಜಪೇಯಿ ಅಂಥವರು ವಿದ್ಯಾವಂತರಾಗಿದ್ದರು. ಅವರ ಕಾಲದಲ್ಲಿ ಆಡಳಿತ ಪಾರದರ್ಶಕವಾಗಿತ್ತು. ರೈತರು ಸಾರ್ವಜನಿಕರ ರಕ್ಷಣೆಗೆ ಒತ್ತು ನೀಡಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದರು ಆದರೆ ಪ್ರಧಾನಿ ನರೇಂದ್ರ ಮೋದಿ ಅವಿದ್ಯಾವಂತ. ಸರ್ಕಾರದಲ್ಲಿರುವವರಿಗೆ ತಿಳುವಳಿಕೆ ಇಲ್ಲ. ತೋಮರ್ ಅವರಿಗೆ ಕೃಷಿ ಹಿನ್ನೆಲೆ ಗೊತ್ತಿಲ್ಲ. ಸಂಸದರು ಧ್ವನಿ ಎತ್ತುತ್ತಿಲ್ಲ” ಎಂದು ಆರೋಪಿಸಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಏಕವ್ಯಕ್ತಿ ಮತ್ತು ಏಕಪಕ್ಷ ಆಡಳಿತ ಅಪಾಯಕಾರಿ ಎಂದು. ಅದೇ ರೀತಿ ಬಿಜೆಪಿ ನಡೆದುಕೊಳ್ಳುತ್ತಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ದೌರ್ಜನ್ಯ ಎಸಗಲಾಗುತ್ತಿದೆ. ಇದು ನಿಲ್ಲಬೇಕು” ಎಂದು ಅವರು ಒತ್ತಾಯಿಸಿದರು.

ಲೇಖಕಿ ಡಾ. ಅರುಂಧತಿ, ಹೋರಾಟಗಾರ್ತಿ ಕಲ್ಯಾಣಿ, ಮಂಜುಳ, ಆಶ್ವಿನಿ ಮೊದಲಾದವರು ಇದ್ದರು.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಪಂಜಾಬ್‌ನಲ್ಲಿ 4 ತಿಂಗಳಿಂದಲೂ ರಿಲಯನ್ಸ್ ಪೆಟ್ರೋಲ್ ಬಂಕ್ ಬಂದ್ ಮಾಡಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...