Homeಕರ್ನಾಟಕನರೇಂದ್ರ ಮೋದಿಯೇ ದೇಶದ್ರೋಹಿ-ಕೇಂದ್ರ ಸರ್ಕಾರದ ದಬ್ಬಾಳಿಕೆ ನಿಲ್ಲಲಿ

ನರೇಂದ್ರ ಮೋದಿಯೇ ದೇಶದ್ರೋಹಿ-ಕೇಂದ್ರ ಸರ್ಕಾರದ ದಬ್ಬಾಳಿಕೆ ನಿಲ್ಲಲಿ

- Advertisement -
- Advertisement -

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಭಾಗವಾಗಿ ಫೆಬ್ರವರಿ 6 ರಂದು ಹಮ್ಮಿಕೊಂಡಿದ್ದ ಚಕ್ಕಾ ಜಾಮ್ ಬೆಂಬಲಿಸಿ ತುಮಕೂರಿನಲ್ಲಿ ರಾಜ್ಯ ರೈತ ಸಂಘಟನೆಗಳ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು. ರಸ್ತೆ ತಡೆಗೆ ಇಳಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಆಗ ಪೊಲೀಸರು ಮತ್ತು ಪ್ರತಿಭಟನ ನಿರತರ ನಡುವೆ ವಾಗ್ವಾದ ನಡೆದಿದೆ.

ಬಂಧಿತ ಪ್ರತಿಭಟನಾಕಾರರನ್ನು ಪೊಲೀಸರು ಚಿಲುಮೆ ಸಮುದಾಯ ಭವನದ ಆವರಣದಲ್ಲಿ ಇಟ್ಟರು. ಅಲ್ಲಿಯೇ ಧರಣಿ ಕುಳಿತ ಪ್ರತಿಭಟನಾಕಾರರು ಪೊಲೀಸರು ಶಾಂತಿಯುತ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ. ಇದು ಖಂಡನೀಯ ಎಂದು ಕಿಡಿಕಾರಿದರು. ಮೂರು ಗಂಟೆಗಳ ಕಾಲ ಚಿಲುಮೆ ಸಮುದಾಯ ಭವನ ಆವರಣದಲ್ಲಿಯೇ ಧರಣಿ ನಡೆಸಿದ ಪ್ರತಿಭಟನಾಕಾರರು ಪೊಲೀಸರ ಕ್ರಮವನ್ನು ಖಂಡಿಸಿದರು. ರೈತರೊಂದಿಗೆ ಗೌರವ ಮತ್ತು ಪ್ರೀತಿಯಿಂದ ನಡೆದುಕೊಳ್ಳದೆ ದೌರ್ಜನ್ಯ ನಡೆಸಲು ಕುಮ್ಮಕ್ಕು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಿಜವಾದ ದೇಶದ್ರೋಹಿ. ಸರ್ಕಾರ ದೇಶದ್ರೋಹ ಕೃತ್ಯದಲ್ಲಿ ತೊಡಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ದಲಿತ ಸಂಘರ್ಷ ಸಮಿತಿ, ರೈತ-ಕೂಲಿಕಾರರ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಎಐಟಿಯುಸಿ, ಎಐಡಿಎಸ್ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು. ಸರ್ಕಾರ ದಬ್ಬಾಳಿಕೆ ಮಾಡಿ ರೈತ ಚಳವಳಿಯನ್ನು ಬಗ್ಗುಬಡಿಯಲು ಯತ್ನಿಸುತ್ತಿದೆ. ರೈತರ ಮೇಲೆ ದಾಳಿ ನಡೆಸುತ್ತಿದೆ. ನೆಪಮಾತ್ರಕ್ಕೆ ಮಾತುಕತೆಗೆ ಕರೆಯುತ್ತಿದೆ. ಕೇಂದ್ರ ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, “ರಾಷ್ಟ್ರಮಟ್ಟದ ಕರೆಗೆ ಓಗೊಟ್ಟಿದ್ದೇವೆ. ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಲಿಲ್ಲ. ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಸರ್ಕಾರ ನಮ್ಮ ಮಾತಿಗೆ ಬೆಲೆ ಕೊಡುತ್ತಿಲ್ಲ. ಬಜೆಟ್‌ನಲ್ಲೂ ರೈತರಿಗೆ ಪರಿಹಾರ ನೀಡಿಲ್ಲ. ವೈಜ್ಞಾನಿಕ ಬೆಂಬಲ ಬೆಲೆ, ಸ್ವಾಮಿನಾಥನ್ ವರದಿ ಬಗ್ಗೆ ಪ್ರಸ್ತಾಪವಿಲ್ಲ. ಅಷ್ಟೇ ಅಲ್ಲ ನೀರಾವರಿಗೂ ಹಣ ಮೀಸಲಿಟ್ಟಿಲ್ಲ. ಇದು ರೈತರಿಗೆ ಅಪಾಯದ ಕರೆಗಂಟೆಯಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಎಳೆದಾಡಿ ಬಂಧನ ಮಾಡಿದೆ. ಪೊಲೀಸರ ಕ್ರಮ ಖಂಡನೀಯ” ಎಂದರು.

“ದೇಶದಲ್ಲಿ ಸರ್ಕಾರಗಳು ಚಳವಳಿಯನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟರೆ ಅದು ಜನಾಂದೋಲನವಾಗಿ ರೂಪುಗೊಳ್ಳಲಿದೆ. ಹಳ್ಳಿಹಳ್ಳಿಗಳಿಂದಲೂ ರೈತರು ಜನಸಾಮಾನ್ಯರು ಎದ್ದು ಬರಲಿದ್ದಾರೆ ಎಂಬ ಎಚ್ಚರ ಸರ್ಕಾರಕ್ಕೆ ಇದ್ದರೆ ಒಳ್ಳೆಯದು. ಇಲ್ಲದಿದ್ದರೆ ಸರ್ಕಾರ ರೈತರ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಾಗೆಯೇ ಬಂಧಿತ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಹೋರಾಟನಿರತ ರೈತರ ಮೇಲೆ ಹಾಕಿರುವ ದೇಶದ್ರೋಹ, ಕೊಲೆಯತ್ನ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ನಾವು ರೈತರನ್ನು ಬೆಂಬಲಿಸಬೇಕು, ಏಕೆಂದರೆ… – ನಿರ್ದೇಶಕ ಪ. ರಂಜಿತ್ ಟ್ವೀಟ್

ಆರ್.ಕೆ.ಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ ಮಾತನಾಡಿ, “ರೈತರ ಬದುಕು ದುಸ್ಥರವಾಗಿದೆ. ಕೃಷಿ ಕಾಯ್ದೆಗಳು ಜಾರಿಗೊಂಡರೆ ರೈತರು, ಗ್ರಾಹಕರು, ಜನಸಾಮಾನ್ಯರು ಬದುಕು ತೀವ್ರ ಅಸ್ತವ್ಯಸ್ತಗೊಳ್ಳುತ್ತದೆ. ಕೃಷಿ ಕಾರ್ಪೋರೇಟ್ ಕುಳಗಳ ಹಿಡಿತಕ್ಕೆ ಸಿಕ್ಕಿ ಶೋಷಣೆ ಹೆಚ್ಚುತ್ತದೆ. ಆಹಾರದ ಕೊರತೆ ಹೆಚ್ಚಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ, “ಇಂದಿರಾಗಾಂಧಿ, ಮನಮೋಹನ್ ಸಿಂಗ್, ವಾಜಪೇಯಿ ಅಂಥವರು ವಿದ್ಯಾವಂತರಾಗಿದ್ದರು. ಅವರ ಕಾಲದಲ್ಲಿ ಆಡಳಿತ ಪಾರದರ್ಶಕವಾಗಿತ್ತು. ರೈತರು ಸಾರ್ವಜನಿಕರ ರಕ್ಷಣೆಗೆ ಒತ್ತು ನೀಡಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದರು ಆದರೆ ಪ್ರಧಾನಿ ನರೇಂದ್ರ ಮೋದಿ ಅವಿದ್ಯಾವಂತ. ಸರ್ಕಾರದಲ್ಲಿರುವವರಿಗೆ ತಿಳುವಳಿಕೆ ಇಲ್ಲ. ತೋಮರ್ ಅವರಿಗೆ ಕೃಷಿ ಹಿನ್ನೆಲೆ ಗೊತ್ತಿಲ್ಲ. ಸಂಸದರು ಧ್ವನಿ ಎತ್ತುತ್ತಿಲ್ಲ” ಎಂದು ಆರೋಪಿಸಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಏಕವ್ಯಕ್ತಿ ಮತ್ತು ಏಕಪಕ್ಷ ಆಡಳಿತ ಅಪಾಯಕಾರಿ ಎಂದು. ಅದೇ ರೀತಿ ಬಿಜೆಪಿ ನಡೆದುಕೊಳ್ಳುತ್ತಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ದೌರ್ಜನ್ಯ ಎಸಗಲಾಗುತ್ತಿದೆ. ಇದು ನಿಲ್ಲಬೇಕು” ಎಂದು ಅವರು ಒತ್ತಾಯಿಸಿದರು.

ಲೇಖಕಿ ಡಾ. ಅರುಂಧತಿ, ಹೋರಾಟಗಾರ್ತಿ ಕಲ್ಯಾಣಿ, ಮಂಜುಳ, ಆಶ್ವಿನಿ ಮೊದಲಾದವರು ಇದ್ದರು.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಪಂಜಾಬ್‌ನಲ್ಲಿ 4 ತಿಂಗಳಿಂದಲೂ ರಿಲಯನ್ಸ್ ಪೆಟ್ರೋಲ್ ಬಂಕ್ ಬಂದ್ ಮಾಡಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...