Homeಕರ್ನಾಟಕಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಯುಪಿಎ ಸರ್ಕಾರದ ಬಗ್ಗೆ ಮೋದಿ ಅವರು ಹಿಂದೆ ಹೇಳಿದ್ದ ಮಾತನ್ನು ಉಲ್ಲೇಖಿಸಿ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಅಪಾಯ’ ಎಂದು ತಿರುಗೇಟು ನೀಡಿದರು.

ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ.50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ.12 ರಷ್ಟು ವಾಪಾಸ್ ಕೊಡುತ್ತಿದ್ದಾರೆ. ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ  ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

‘ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ.50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ, ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ. 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು’ ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

‘ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ’ ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.

‘ಕೇಂದ್ರದಿಂದ ರಾಜ್ಯಕ್ಕೆ  ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ₹24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ ₹51000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ ₹30,42,243 ಕೋಟಿ ಇದ್ದರೆ ನಮಗೆ ಬಂದಿದ್ದು ₹31734ಕೋಟಿ. 2021-22 ರಲ್ಲಿ ₹34,83,236 ಕೋಟಿ ಗಾತ್ರದ ಬಜೆಟ್ಟಿನಲ್ಲಿ ರಾಜ್ಯಕ್ಕೆ ₹48589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ ₹4181232 ಕೋಟಿ, ಆಗ ರಾಜ್ಯಕ್ಕೆ ₹53510 ಕೋಟಿ ಮಾತ್ರ ಬಂತು. 2023-24ರಲ್ಲಿ ₹45,03007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು ₹50257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ ₹59785 ಕೋಟಿ ಬರುತ್ತದೆ’ ಎಂದು ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಆರ್ಥಿಕ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

‘ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ, ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದರು. ಅದೇ ಪ್ರಧಾನಿ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ  2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ’ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...