Homeಕರ್ನಾಟಕಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಯುಪಿಎ ಸರ್ಕಾರದ ಬಗ್ಗೆ ಮೋದಿ ಅವರು ಹಿಂದೆ ಹೇಳಿದ್ದ ಮಾತನ್ನು ಉಲ್ಲೇಖಿಸಿ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಅಪಾಯ’ ಎಂದು ತಿರುಗೇಟು ನೀಡಿದರು.

ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ.50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ.12 ರಷ್ಟು ವಾಪಾಸ್ ಕೊಡುತ್ತಿದ್ದಾರೆ. ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ  ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

‘ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ.50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ, ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ. 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು’ ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

‘ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ’ ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.

‘ಕೇಂದ್ರದಿಂದ ರಾಜ್ಯಕ್ಕೆ  ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ₹24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ ₹51000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ ₹30,42,243 ಕೋಟಿ ಇದ್ದರೆ ನಮಗೆ ಬಂದಿದ್ದು ₹31734ಕೋಟಿ. 2021-22 ರಲ್ಲಿ ₹34,83,236 ಕೋಟಿ ಗಾತ್ರದ ಬಜೆಟ್ಟಿನಲ್ಲಿ ರಾಜ್ಯಕ್ಕೆ ₹48589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ ₹4181232 ಕೋಟಿ, ಆಗ ರಾಜ್ಯಕ್ಕೆ ₹53510 ಕೋಟಿ ಮಾತ್ರ ಬಂತು. 2023-24ರಲ್ಲಿ ₹45,03007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು ₹50257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ ₹59785 ಕೋಟಿ ಬರುತ್ತದೆ’ ಎಂದು ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಆರ್ಥಿಕ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

‘ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ, ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದರು. ಅದೇ ಪ್ರಧಾನಿ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ  2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ’ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...