Homeಕರ್ನಾಟಕಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಯುಪಿಎ ಸರ್ಕಾರದ ಬಗ್ಗೆ ಮೋದಿ ಅವರು ಹಿಂದೆ ಹೇಳಿದ್ದ ಮಾತನ್ನು ಉಲ್ಲೇಖಿಸಿ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಅಪಾಯ’ ಎಂದು ತಿರುಗೇಟು ನೀಡಿದರು.

ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ.50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ.12 ರಷ್ಟು ವಾಪಾಸ್ ಕೊಡುತ್ತಿದ್ದಾರೆ. ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ  ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

‘ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ.50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ, ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ. 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು’ ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

‘ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ’ ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.

‘ಕೇಂದ್ರದಿಂದ ರಾಜ್ಯಕ್ಕೆ  ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ₹24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ ₹51000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ ₹30,42,243 ಕೋಟಿ ಇದ್ದರೆ ನಮಗೆ ಬಂದಿದ್ದು ₹31734ಕೋಟಿ. 2021-22 ರಲ್ಲಿ ₹34,83,236 ಕೋಟಿ ಗಾತ್ರದ ಬಜೆಟ್ಟಿನಲ್ಲಿ ರಾಜ್ಯಕ್ಕೆ ₹48589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ ₹4181232 ಕೋಟಿ, ಆಗ ರಾಜ್ಯಕ್ಕೆ ₹53510 ಕೋಟಿ ಮಾತ್ರ ಬಂತು. 2023-24ರಲ್ಲಿ ₹45,03007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು ₹50257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ ₹59785 ಕೋಟಿ ಬರುತ್ತದೆ’ ಎಂದು ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಆರ್ಥಿಕ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

‘ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ, ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದರು. ಅದೇ ಪ್ರಧಾನಿ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ  2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ’ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...