Homeಕರ್ನಾಟಕಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಯುಪಿಎ ಸರ್ಕಾರದ ಬಗ್ಗೆ ಮೋದಿ ಅವರು ಹಿಂದೆ ಹೇಳಿದ್ದ ಮಾತನ್ನು ಉಲ್ಲೇಖಿಸಿ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಅಪಾಯ’ ಎಂದು ತಿರುಗೇಟು ನೀಡಿದರು.

ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ.50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ.12 ರಷ್ಟು ವಾಪಾಸ್ ಕೊಡುತ್ತಿದ್ದಾರೆ. ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ  ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

‘ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ.50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ, ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ. 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು’ ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

‘ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ’ ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.

‘ಕೇಂದ್ರದಿಂದ ರಾಜ್ಯಕ್ಕೆ  ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ₹24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ ₹51000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ ₹30,42,243 ಕೋಟಿ ಇದ್ದರೆ ನಮಗೆ ಬಂದಿದ್ದು ₹31734ಕೋಟಿ. 2021-22 ರಲ್ಲಿ ₹34,83,236 ಕೋಟಿ ಗಾತ್ರದ ಬಜೆಟ್ಟಿನಲ್ಲಿ ರಾಜ್ಯಕ್ಕೆ ₹48589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ ₹4181232 ಕೋಟಿ, ಆಗ ರಾಜ್ಯಕ್ಕೆ ₹53510 ಕೋಟಿ ಮಾತ್ರ ಬಂತು. 2023-24ರಲ್ಲಿ ₹45,03007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು ₹50257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ ₹59785 ಕೋಟಿ ಬರುತ್ತದೆ’ ಎಂದು ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಆರ್ಥಿಕ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

‘ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ, ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದರು. ಅದೇ ಪ್ರಧಾನಿ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ  2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ’ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...