Homeಮುಖಪುಟಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

ಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು “ಒಟ್ಟಾಗಿ ಕೆಲಸ ಮಾಡುವ” ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯವರಿಗೆ ಸ್ಪಷ್ಟಪಡಿಸಿದೆ ಎಂದು ಶರದ್‌ ಪವಾರ್ ಹೇಳಿದ್ದಾರೆ.

ಸೋಮವಾರ ಮರಾಠಿ ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಬಹಿರಂಗಪಡಿಸಿರುವ ಶರದ್‌ ಪವಾರ್‌, “ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಮೋದಿ ಪ್ರಸ್ತಾಪಿಸಿದರು. ನಮ್ಮ ವೈಯಕ್ತಿಕ ಸಂಬಂಧಗಳು ತುಂಬಾ ಚೆನ್ನಾಗಿವೆ ಮತ್ತು ಅವುಗಳು ಹಾಗೇ ಉಳಿಯಬೇಕು, ಹಾಗಾಗಿ ನಾವು ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ನಾನು ಅವರಿಗೆ ಹೇಳಿದೆ ಎಂದಿದ್ದಾರೆ.

ಮೋದಿ ಸರ್ಕಾರವು ಅವರನ್ನು ಭಾರತದ ರಾಷ್ಟ್ರಪತಿಗಳನ್ನಾಗಿ ಮಾಡಲು ಮುಂದಾಗಿದೆ ಎಂಬ ವರದಿಗಳನ್ನು ಶರದ್‌ ಪವಾರ್ ತಳ್ಳಿಹಾಕಿದ್ದಾರೆ. “ಆದರೆ ಮೋದಿ ನೇತೃತ್ವದ ಸಂಪುಟದಲ್ಲಿ ಪವಾರ್‌ ಮಗಳಾದ ಸುಪ್ರಿಯ ಸುಳೆಯವರನ್ನು ಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವಿತ್ತು” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಬೆಳವಣಿಗೆಗಳ ಮಧ್ಯೆಯೇ ಪವಾರ್ ಕಳೆದ ತಿಂಗಳು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.

ಕಳೆದ ತಿಂಗಳು ರಾಜ್ಯಸಭೆಯ 250 ನೇ ಅಧಿವೇಶನದಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ಅವರು ಶರದ್‌  ಪವಾರ್ ಅವರನ್ನು ಶ್ಲಾಘಿಸಿದ್ದರು. ಅಲ್ಲಿ ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ಸಂಸತ್ತಿನ ಮಾನದಂಡಗಳನ್ನು ಹೇಗೆ ಪಾಲಿಸಬೇಕು ಎಂಬುದರ ಕುರಿತು ಎನ್‌ಸಿಪಿಯಿಂದ ಕಲಿಯಬೇಕು ಎಂದು ಮೋದಿ ಹೇಳಿದ್ದರು.

2016 ರಲ್ಲಿ, ಮೋದಿಯವರು ಪವಾರ್ ಅವರ ಆಹ್ವಾನದ ಮೇರೆಗೆ ಪುಣೆಯ ವಸಂತದಾದ ಸಕ್ಕರೆ ಸಂಸ್ಥೆಗೆ ಭೇಟಿ ನೀಡಿದಾಗ, ಅವರು ಎನ್‌ಸಿಪಿ ಮುಖ್ಯಸ್ಥ ಪವಾರ್‌ರನ್ನು ಸಾರ್ವಜನಿಕ ಜೀವನದಲ್ಲಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೊಗಳಿದ್ದರು.

“ನನಗೆ ಪವಾರ್ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ. ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅವರು ನನ್ನ ಬೆರಳು ಹಿಡಿದು ನಡೆಯಲು ಸಹಾಯ ಮಾಡಿದ್ದರು. ಇದನ್ನು ಸಾರ್ವಜನಿಕವಾಗಿ ಉಚ್ಚರಿಸಲು ನನಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

“ಅಜಿತ್ ಪವಾರ್‌ ಏಕಾಏಕಿ ಫಡ್ನವೀಸ್‌ಗೆ ಬೆಂಬಲ ನೀಡಿದ ವಿಷಯ ತಿಳಿದಾಗ, ನಾನು ಮೊದಲು ಸಂಪರ್ಕಿಸಿದ ವ್ಯಕ್ತಿ ಉದ್ಧವ್‌ ಠಾಕ್ರೆ. ಏನಾಯಿತು ಎಂಬುದು ಸರಿಯಾಗಿ ಗೊತ್ತಿಲ್ಲ. ಆದರೆ ನಾನು ಬಂಡಾಯವನ್ನು ಶಮನಮಾಡುತ್ತೇನೆ ಎಂದು ಅವರಿಗೆ ವಿಶ್ವಾಸ ಕೊಟ್ಟಿದ್ದೆ” ಎಂದು ಪವಾರ್ ಹೇಳಿದ್ದಾರೆ.

“ಅಜಿತ್ ಪವಾರ್‌ ಅವರ ಕ್ರಮಕ್ಕೆ ನನ್ನ ಬೆಂಬಲ ಇಲ್ಲ ಎಂದು ಎನ್‌ಸಿಪಿಯಲ್ಲಿರುವ ಎಲ್ಲರಿಗೂ ತಿಳಿದಾಗ, ಅವರೊಂದಿಗೆ ಇದ್ದ ‍ಶಾಸಕರು ಕೂಡ ನಮ್ಮ ಜೊತೆ ಬಂದರು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...