Homeಮುಖಪುಟಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

ಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು “ಒಟ್ಟಾಗಿ ಕೆಲಸ ಮಾಡುವ” ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯವರಿಗೆ ಸ್ಪಷ್ಟಪಡಿಸಿದೆ ಎಂದು ಶರದ್‌ ಪವಾರ್ ಹೇಳಿದ್ದಾರೆ.

ಸೋಮವಾರ ಮರಾಠಿ ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಬಹಿರಂಗಪಡಿಸಿರುವ ಶರದ್‌ ಪವಾರ್‌, “ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಮೋದಿ ಪ್ರಸ್ತಾಪಿಸಿದರು. ನಮ್ಮ ವೈಯಕ್ತಿಕ ಸಂಬಂಧಗಳು ತುಂಬಾ ಚೆನ್ನಾಗಿವೆ ಮತ್ತು ಅವುಗಳು ಹಾಗೇ ಉಳಿಯಬೇಕು, ಹಾಗಾಗಿ ನಾವು ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ನಾನು ಅವರಿಗೆ ಹೇಳಿದೆ ಎಂದಿದ್ದಾರೆ.

ಮೋದಿ ಸರ್ಕಾರವು ಅವರನ್ನು ಭಾರತದ ರಾಷ್ಟ್ರಪತಿಗಳನ್ನಾಗಿ ಮಾಡಲು ಮುಂದಾಗಿದೆ ಎಂಬ ವರದಿಗಳನ್ನು ಶರದ್‌ ಪವಾರ್ ತಳ್ಳಿಹಾಕಿದ್ದಾರೆ. “ಆದರೆ ಮೋದಿ ನೇತೃತ್ವದ ಸಂಪುಟದಲ್ಲಿ ಪವಾರ್‌ ಮಗಳಾದ ಸುಪ್ರಿಯ ಸುಳೆಯವರನ್ನು ಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವಿತ್ತು” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಬೆಳವಣಿಗೆಗಳ ಮಧ್ಯೆಯೇ ಪವಾರ್ ಕಳೆದ ತಿಂಗಳು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.

ಕಳೆದ ತಿಂಗಳು ರಾಜ್ಯಸಭೆಯ 250 ನೇ ಅಧಿವೇಶನದಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ಅವರು ಶರದ್‌  ಪವಾರ್ ಅವರನ್ನು ಶ್ಲಾಘಿಸಿದ್ದರು. ಅಲ್ಲಿ ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ಸಂಸತ್ತಿನ ಮಾನದಂಡಗಳನ್ನು ಹೇಗೆ ಪಾಲಿಸಬೇಕು ಎಂಬುದರ ಕುರಿತು ಎನ್‌ಸಿಪಿಯಿಂದ ಕಲಿಯಬೇಕು ಎಂದು ಮೋದಿ ಹೇಳಿದ್ದರು.

2016 ರಲ್ಲಿ, ಮೋದಿಯವರು ಪವಾರ್ ಅವರ ಆಹ್ವಾನದ ಮೇರೆಗೆ ಪುಣೆಯ ವಸಂತದಾದ ಸಕ್ಕರೆ ಸಂಸ್ಥೆಗೆ ಭೇಟಿ ನೀಡಿದಾಗ, ಅವರು ಎನ್‌ಸಿಪಿ ಮುಖ್ಯಸ್ಥ ಪವಾರ್‌ರನ್ನು ಸಾರ್ವಜನಿಕ ಜೀವನದಲ್ಲಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೊಗಳಿದ್ದರು.

“ನನಗೆ ಪವಾರ್ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ. ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅವರು ನನ್ನ ಬೆರಳು ಹಿಡಿದು ನಡೆಯಲು ಸಹಾಯ ಮಾಡಿದ್ದರು. ಇದನ್ನು ಸಾರ್ವಜನಿಕವಾಗಿ ಉಚ್ಚರಿಸಲು ನನಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

“ಅಜಿತ್ ಪವಾರ್‌ ಏಕಾಏಕಿ ಫಡ್ನವೀಸ್‌ಗೆ ಬೆಂಬಲ ನೀಡಿದ ವಿಷಯ ತಿಳಿದಾಗ, ನಾನು ಮೊದಲು ಸಂಪರ್ಕಿಸಿದ ವ್ಯಕ್ತಿ ಉದ್ಧವ್‌ ಠಾಕ್ರೆ. ಏನಾಯಿತು ಎಂಬುದು ಸರಿಯಾಗಿ ಗೊತ್ತಿಲ್ಲ. ಆದರೆ ನಾನು ಬಂಡಾಯವನ್ನು ಶಮನಮಾಡುತ್ತೇನೆ ಎಂದು ಅವರಿಗೆ ವಿಶ್ವಾಸ ಕೊಟ್ಟಿದ್ದೆ” ಎಂದು ಪವಾರ್ ಹೇಳಿದ್ದಾರೆ.

“ಅಜಿತ್ ಪವಾರ್‌ ಅವರ ಕ್ರಮಕ್ಕೆ ನನ್ನ ಬೆಂಬಲ ಇಲ್ಲ ಎಂದು ಎನ್‌ಸಿಪಿಯಲ್ಲಿರುವ ಎಲ್ಲರಿಗೂ ತಿಳಿದಾಗ, ಅವರೊಂದಿಗೆ ಇದ್ದ ‍ಶಾಸಕರು ಕೂಡ ನಮ್ಮ ಜೊತೆ ಬಂದರು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...