Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...