Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...