Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...