Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...