Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...