Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...