Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...