Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...