Homeಮುಖಪುಟಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

ಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

- Advertisement -
- Advertisement -

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಮತ್ತೆ ಮರು ಅಪ್ಲೋಡ್ ಮಾಡಲಾಗಿದೆ. ಅಧಿಕೃತವಾಗಿ ಮಂಗಳವಾರ ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಈಗ ಬಿಬಿಸಿ ವೆಬ್‌ಸೈಟ್ ನಲ್ಲಿ ಅದನ್ನು ನೋಡಬಹುದಾಗಿದೆ.

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಮತ್ತು ಗಲಭೆಗೆ ಮೋದಿಯವರೆ ಹೊಣೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ. ಸಾಕ್ಷ್ಯ ಚಿತ್ರ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆದರೆ ನರೇಂದ್ರ ಮೋದಿಯವರು ಅದನ್ನು ಅಲ್ಲಗೆಳೆದಿದ್ದರು. ಹಿಂಸಾಚಾರದ ಬಗ್ಗೆ ಭಾರತದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿ ಅಂತಿಮ ವರದಿ ನೀಡಿದೆ. ಈ ವರದಿಯು, 2012ರ ಫೆಬ್ರವರಿ ನಲ್ಲಿ ಮೋದಿ ಮತ್ತು ಇತರ 63 ಜನರ ವಿರುದ್ಧ ವಿಚಾರಣೆ ಮಾಡಬಹುದಾದ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದೆ. 2013 ರಲ್ಲಿ ತಂಡದ ವರದಿಯನ್ನು ಮ್ಯಾಜಿಸ್ಟ್ರೇಟ್ ಒಪ್ಪಿಕೊಂಡರು.

ಕಳೆದ ವರ್ಷ ಜೂನ್ 24 ರಂದು, ಎಸ್‌ಐಟಿ ವರದಿಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದಾಗ 69 ಜನರು ಸಾವಿಗೀಡಾದರು ಆದರಲ್ಲಿ ಎಹ್ಸಾನ್ ಜಾಫ್ರಿ ಕೂಡ ಒಬ್ಬರಾಗಿದ್ದಾರೆ.

ಮಂಗಳವಾರ ಬಿಡುಗಡೆಯಾದ BBC ಸಾಕ್ಷ್ಯಚಿತ್ರವು ಮಾಜಿ ಹಿರಿಯ ರಾಜತಾಂತ್ರಿಕ ಸಂದರ್ಶನವನ್ನು ಒಳಗೊಂಡಿದೆ. ಯುನೈಟೆಡ್ ಕಿಂಗ್‌ಡಮ್ ಸರ್ಕಾರ ಕಳುಹಿಸಿದ ತನಿಖಾಧಿಕಾರಿಗಳಲ್ಲಿ ಒಬ್ಬರು, “ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ” ಎಂದು ಹೇಳಿದ್ದಾರೆ.

“ವಿಎಚ್‌ಪಿ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯ ಸರ್ಕಾರವು ಸೃಷ್ಟಿಸಿದ ಭಯದ ವಾತಾವರಣವಿಲ್ಲದೆ ಇಷ್ಟು ಹಾನಿಯನ್ನುಂಟುಮಾಡಲು ಸಾಧ್ಯವಿಲ್ಲ” ಎಂದು ಬ್ರಿಟಿಷ್ ಸರ್ಕಾರದ ತನಿಖಾ ತಂಡದ ವರದಿಯು ಹೇಳಿತ್ತು.

ಫೆಬ್ರವರಿ 27, 2002 ರಂದು ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದ್ದಾರೆ ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ತಂಡವು ಉಲ್ಲೇಖಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ.

ಇದನ್ನೂ ಓದಿ: 2002 ಗುಜರಾತ್‌ ಗಲಭೆಕೋರರಿಗೆ ಪಾಠ ಕಲಿಸಿದ್ದೇವೆ ಎಂದ ಅಮಿತ್‌ ಶಾ; ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...