Homeಮುಖಪುಟಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

ಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

- Advertisement -
- Advertisement -

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಮತ್ತೆ ಮರು ಅಪ್ಲೋಡ್ ಮಾಡಲಾಗಿದೆ. ಅಧಿಕೃತವಾಗಿ ಮಂಗಳವಾರ ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಈಗ ಬಿಬಿಸಿ ವೆಬ್‌ಸೈಟ್ ನಲ್ಲಿ ಅದನ್ನು ನೋಡಬಹುದಾಗಿದೆ.

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಮತ್ತು ಗಲಭೆಗೆ ಮೋದಿಯವರೆ ಹೊಣೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ. ಸಾಕ್ಷ್ಯ ಚಿತ್ರ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆದರೆ ನರೇಂದ್ರ ಮೋದಿಯವರು ಅದನ್ನು ಅಲ್ಲಗೆಳೆದಿದ್ದರು. ಹಿಂಸಾಚಾರದ ಬಗ್ಗೆ ಭಾರತದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿ ಅಂತಿಮ ವರದಿ ನೀಡಿದೆ. ಈ ವರದಿಯು, 2012ರ ಫೆಬ್ರವರಿ ನಲ್ಲಿ ಮೋದಿ ಮತ್ತು ಇತರ 63 ಜನರ ವಿರುದ್ಧ ವಿಚಾರಣೆ ಮಾಡಬಹುದಾದ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದೆ. 2013 ರಲ್ಲಿ ತಂಡದ ವರದಿಯನ್ನು ಮ್ಯಾಜಿಸ್ಟ್ರೇಟ್ ಒಪ್ಪಿಕೊಂಡರು.

ಕಳೆದ ವರ್ಷ ಜೂನ್ 24 ರಂದು, ಎಸ್‌ಐಟಿ ವರದಿಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದಾಗ 69 ಜನರು ಸಾವಿಗೀಡಾದರು ಆದರಲ್ಲಿ ಎಹ್ಸಾನ್ ಜಾಫ್ರಿ ಕೂಡ ಒಬ್ಬರಾಗಿದ್ದಾರೆ.

ಮಂಗಳವಾರ ಬಿಡುಗಡೆಯಾದ BBC ಸಾಕ್ಷ್ಯಚಿತ್ರವು ಮಾಜಿ ಹಿರಿಯ ರಾಜತಾಂತ್ರಿಕ ಸಂದರ್ಶನವನ್ನು ಒಳಗೊಂಡಿದೆ. ಯುನೈಟೆಡ್ ಕಿಂಗ್‌ಡಮ್ ಸರ್ಕಾರ ಕಳುಹಿಸಿದ ತನಿಖಾಧಿಕಾರಿಗಳಲ್ಲಿ ಒಬ್ಬರು, “ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ” ಎಂದು ಹೇಳಿದ್ದಾರೆ.

“ವಿಎಚ್‌ಪಿ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯ ಸರ್ಕಾರವು ಸೃಷ್ಟಿಸಿದ ಭಯದ ವಾತಾವರಣವಿಲ್ಲದೆ ಇಷ್ಟು ಹಾನಿಯನ್ನುಂಟುಮಾಡಲು ಸಾಧ್ಯವಿಲ್ಲ” ಎಂದು ಬ್ರಿಟಿಷ್ ಸರ್ಕಾರದ ತನಿಖಾ ತಂಡದ ವರದಿಯು ಹೇಳಿತ್ತು.

ಫೆಬ್ರವರಿ 27, 2002 ರಂದು ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದ್ದಾರೆ ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ತಂಡವು ಉಲ್ಲೇಖಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ.

ಇದನ್ನೂ ಓದಿ: 2002 ಗುಜರಾತ್‌ ಗಲಭೆಕೋರರಿಗೆ ಪಾಠ ಕಲಿಸಿದ್ದೇವೆ ಎಂದ ಅಮಿತ್‌ ಶಾ; ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...