Homeಮುಖಪುಟಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ: ಪ್ರಧಾನಿಯು ಸಹೋದರ ಉದ್ಧವ್‌ ಠಾಕ್ರೆಗೆ ಸಹಕರಿಸಬೇಕು - ಶಿವಸೇನೆ

ಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ: ಪ್ರಧಾನಿಯು ಸಹೋದರ ಉದ್ಧವ್‌ ಠಾಕ್ರೆಗೆ ಸಹಕರಿಸಬೇಕು – ಶಿವಸೇನೆ

- Advertisement -
- Advertisement -

ಪ್ರಧಾನಿಯು ಕಿರಿಯ ಸಹೋದರ ಉದ್ಧವ್‌ ಠಾಕ್ರೆಯವರೊಂದಿಗೆ ಸಹಕರಿಸಬೇಕು ಎಂದು ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ.

“ಬಿಜೆಪಿ-ಶಿವಸೇನೆ ಮಹಾರಾಷ್ಟ್ರ ರಾಜಕೀಯದಲ್ಲಿ ಅಷ್ಟು ಹಿತಕರವಲ್ಲದ ಸಂಬಂಧಗಳನ್ನು ಹಂಚಿಕೊಳ್ಳುತ್ತಿವೆ. ಆದರೆ ನರೇಂದ್ರ ಮೋದಿ ಮತ್ತು ಉದ್ಧವ್ ಠಾಕ್ರೆ ಸಹೋದರ ಸಂಬಂಧಿಗಳಾಗಿದ್ದಾರೆ. ಆದ್ದರಿಂದ ಮಹಾರಾಷ್ಟ್ರದ ಕಿರಿಯ ಸಹೋದರನೊಂದಿಗೆ ಪ್ರಧಾನ ಮಂತ್ರಿಯಾಗಿ ಸಹಕರಿಸುವುದು ಮೋದಿಯವರ ಜವಾಬ್ದಾರಿಯಾಗಿದೆ ಎಂದು ಸಾಮ್ನಾದಲ್ಲಿ ಬರೆದಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಪ್ರಧಾನ ಮಂತ್ರಿ ಯಾವುದೇ ಒಂದು ಪಕ್ಷಕ್ಕೆ ಸೇರಿಲ್ಲ. ಇಡೀ ದೇಶವನ್ನು ಅವರು ಪ್ರತಿನಿಧಿಸುತ್ತಾರೆ. “ಮಹಾರಾಷ್ಟ್ರದ ಜನರು ತೆಗೆದುಕೊಂಡ ನಿರ್ಧಾರವನ್ನು ದೆಹಲಿ ಗೌರವಿಸಬೇಕು ಮತ್ತು ರಾಜ್ಯ ಸರ್ಕಾರದ ಸ್ಥಿರತೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು” ಎಂದು ಪಕ್ಷವು ತನ್ನ ಮುಖವಾಣಿಯಲ್ಲಿ ಹೇಳಿದೆ.

“ತ್ವರಿತ ಅಭಿವೃದ್ಧಿಗಾಗಿ ಕೇಂದ್ರವು ರಾಜ್ಯದೊಂದಿಗೆ ಸಹಕರಿಸಬೇಕಾಗುತ್ತದೆ. ಮಹಾರಾಷ್ಟ್ರದ ರೈತರನ್ನು ಅವರ ದುಃಖದಿಂದ ಹೊರಗೆ ತರಲು ಕೇಂದ್ರವು ಸಹಾಯವನ್ನು ನೀಡಬೇಕಾಗುತ್ತದೆ” ಎಂದು ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

“ದೆಹಲಿ ಖಚಿತವಾಗಿ ದೇಶದ ರಾಜಧಾನಿಯಾಗಿದೆ. ಆದರೆ ಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ ಎಂದು ದೃಢವಾದ ನಿಲುವನ್ನು ತೆಗೆದುಕೊಂಡ ಬಾಲಾಸಾಹೇಬ್ ಠಾಕ್ರೆ ಅವರ ಪುತ್ರ ಉದ್ಧವ್ ಠಾಕ್ರೆ ಈಗ ಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ, ಸರ್ಕಾರವು ಖಚಿತವಾಗಿದೆ ಅದರ ಬೆನ್ನುಮೂಳೆಯು ಗಟ್ಟಿಯಾಗಿಯೇ ಇರುತ್ತದೆ “ಎಂದು ಅದು ಹೇಳಿದೆ.

ಇದನ್ನೂ ಓದಿ: ದುರಹಂಕಾರದ ರಾಜಕೀಯ ಕೆಲಸ ಮಾಡುವುದಿಲ್ಲ, ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ: ಗೆಲುವಿನ ಬಳಿಕ ಮಮತಾ ಬ್ಯಾನರ್ಜಿ

ಉದ್ಧವ್‌ ಠಾಕ್ರೆಯವರು ಬುಧವಾರ ಸಂಜೆ ಪ್ರಧಾನಿ ಮೋದಿಯವರನ್ನು ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಮುಂಬೈಗೆ ಆಹ್ವಾನಿಸಿದ್ದರು. ಆದರೆ ಭಾಗವಹಿಸಲು ಸಾಧ್ಯವಾಗದ ಮೋದಿಯವರು “ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದ್ಧವ್‌ ಠಾಕ್ರೆಜಿ ಅವರಿಗೆ ಅಭಿನಂದನೆಗಳು. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಹೋದರತ್ವದ ಹೆಸರಿನಲ್ಲಿ ನಂಬಿಕೆ ದ್ರೋಹ ಮಾಡಿದರು ಸಹಿಸಿಕೊಂಡು ಸಹಕರಿಸಬೇಕಾ..?!! ಅಂತಹ ದರ್ದು ಬಿಜೆಪಿಗೆ ಬಂದಿಲ್ಲ..!!!

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...