Homeಮುಖಪುಟಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ: ಪ್ರಧಾನಿಯು ಸಹೋದರ ಉದ್ಧವ್‌ ಠಾಕ್ರೆಗೆ ಸಹಕರಿಸಬೇಕು - ಶಿವಸೇನೆ

ಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ: ಪ್ರಧಾನಿಯು ಸಹೋದರ ಉದ್ಧವ್‌ ಠಾಕ್ರೆಗೆ ಸಹಕರಿಸಬೇಕು – ಶಿವಸೇನೆ

- Advertisement -
- Advertisement -

ಪ್ರಧಾನಿಯು ಕಿರಿಯ ಸಹೋದರ ಉದ್ಧವ್‌ ಠಾಕ್ರೆಯವರೊಂದಿಗೆ ಸಹಕರಿಸಬೇಕು ಎಂದು ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ.

“ಬಿಜೆಪಿ-ಶಿವಸೇನೆ ಮಹಾರಾಷ್ಟ್ರ ರಾಜಕೀಯದಲ್ಲಿ ಅಷ್ಟು ಹಿತಕರವಲ್ಲದ ಸಂಬಂಧಗಳನ್ನು ಹಂಚಿಕೊಳ್ಳುತ್ತಿವೆ. ಆದರೆ ನರೇಂದ್ರ ಮೋದಿ ಮತ್ತು ಉದ್ಧವ್ ಠಾಕ್ರೆ ಸಹೋದರ ಸಂಬಂಧಿಗಳಾಗಿದ್ದಾರೆ. ಆದ್ದರಿಂದ ಮಹಾರಾಷ್ಟ್ರದ ಕಿರಿಯ ಸಹೋದರನೊಂದಿಗೆ ಪ್ರಧಾನ ಮಂತ್ರಿಯಾಗಿ ಸಹಕರಿಸುವುದು ಮೋದಿಯವರ ಜವಾಬ್ದಾರಿಯಾಗಿದೆ ಎಂದು ಸಾಮ್ನಾದಲ್ಲಿ ಬರೆದಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಪ್ರಧಾನ ಮಂತ್ರಿ ಯಾವುದೇ ಒಂದು ಪಕ್ಷಕ್ಕೆ ಸೇರಿಲ್ಲ. ಇಡೀ ದೇಶವನ್ನು ಅವರು ಪ್ರತಿನಿಧಿಸುತ್ತಾರೆ. “ಮಹಾರಾಷ್ಟ್ರದ ಜನರು ತೆಗೆದುಕೊಂಡ ನಿರ್ಧಾರವನ್ನು ದೆಹಲಿ ಗೌರವಿಸಬೇಕು ಮತ್ತು ರಾಜ್ಯ ಸರ್ಕಾರದ ಸ್ಥಿರತೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು” ಎಂದು ಪಕ್ಷವು ತನ್ನ ಮುಖವಾಣಿಯಲ್ಲಿ ಹೇಳಿದೆ.

“ತ್ವರಿತ ಅಭಿವೃದ್ಧಿಗಾಗಿ ಕೇಂದ್ರವು ರಾಜ್ಯದೊಂದಿಗೆ ಸಹಕರಿಸಬೇಕಾಗುತ್ತದೆ. ಮಹಾರಾಷ್ಟ್ರದ ರೈತರನ್ನು ಅವರ ದುಃಖದಿಂದ ಹೊರಗೆ ತರಲು ಕೇಂದ್ರವು ಸಹಾಯವನ್ನು ನೀಡಬೇಕಾಗುತ್ತದೆ” ಎಂದು ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

“ದೆಹಲಿ ಖಚಿತವಾಗಿ ದೇಶದ ರಾಜಧಾನಿಯಾಗಿದೆ. ಆದರೆ ಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ ಎಂದು ದೃಢವಾದ ನಿಲುವನ್ನು ತೆಗೆದುಕೊಂಡ ಬಾಲಾಸಾಹೇಬ್ ಠಾಕ್ರೆ ಅವರ ಪುತ್ರ ಉದ್ಧವ್ ಠಾಕ್ರೆ ಈಗ ಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ, ಸರ್ಕಾರವು ಖಚಿತವಾಗಿದೆ ಅದರ ಬೆನ್ನುಮೂಳೆಯು ಗಟ್ಟಿಯಾಗಿಯೇ ಇರುತ್ತದೆ “ಎಂದು ಅದು ಹೇಳಿದೆ.

ಇದನ್ನೂ ಓದಿ: ದುರಹಂಕಾರದ ರಾಜಕೀಯ ಕೆಲಸ ಮಾಡುವುದಿಲ್ಲ, ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ: ಗೆಲುವಿನ ಬಳಿಕ ಮಮತಾ ಬ್ಯಾನರ್ಜಿ

ಉದ್ಧವ್‌ ಠಾಕ್ರೆಯವರು ಬುಧವಾರ ಸಂಜೆ ಪ್ರಧಾನಿ ಮೋದಿಯವರನ್ನು ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಮುಂಬೈಗೆ ಆಹ್ವಾನಿಸಿದ್ದರು. ಆದರೆ ಭಾಗವಹಿಸಲು ಸಾಧ್ಯವಾಗದ ಮೋದಿಯವರು “ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದ್ಧವ್‌ ಠಾಕ್ರೆಜಿ ಅವರಿಗೆ ಅಭಿನಂದನೆಗಳು. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಹೋದರತ್ವದ ಹೆಸರಿನಲ್ಲಿ ನಂಬಿಕೆ ದ್ರೋಹ ಮಾಡಿದರು ಸಹಿಸಿಕೊಂಡು ಸಹಕರಿಸಬೇಕಾ..?!! ಅಂತಹ ದರ್ದು ಬಿಜೆಪಿಗೆ ಬಂದಿಲ್ಲ..!!!

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...