Homeಮುಖಪುಟಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ: ಪ್ರಧಾನಿಯು ಸಹೋದರ ಉದ್ಧವ್‌ ಠಾಕ್ರೆಗೆ ಸಹಕರಿಸಬೇಕು - ಶಿವಸೇನೆ

ಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ: ಪ್ರಧಾನಿಯು ಸಹೋದರ ಉದ್ಧವ್‌ ಠಾಕ್ರೆಗೆ ಸಹಕರಿಸಬೇಕು – ಶಿವಸೇನೆ

- Advertisement -
- Advertisement -

ಪ್ರಧಾನಿಯು ಕಿರಿಯ ಸಹೋದರ ಉದ್ಧವ್‌ ಠಾಕ್ರೆಯವರೊಂದಿಗೆ ಸಹಕರಿಸಬೇಕು ಎಂದು ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ.

“ಬಿಜೆಪಿ-ಶಿವಸೇನೆ ಮಹಾರಾಷ್ಟ್ರ ರಾಜಕೀಯದಲ್ಲಿ ಅಷ್ಟು ಹಿತಕರವಲ್ಲದ ಸಂಬಂಧಗಳನ್ನು ಹಂಚಿಕೊಳ್ಳುತ್ತಿವೆ. ಆದರೆ ನರೇಂದ್ರ ಮೋದಿ ಮತ್ತು ಉದ್ಧವ್ ಠಾಕ್ರೆ ಸಹೋದರ ಸಂಬಂಧಿಗಳಾಗಿದ್ದಾರೆ. ಆದ್ದರಿಂದ ಮಹಾರಾಷ್ಟ್ರದ ಕಿರಿಯ ಸಹೋದರನೊಂದಿಗೆ ಪ್ರಧಾನ ಮಂತ್ರಿಯಾಗಿ ಸಹಕರಿಸುವುದು ಮೋದಿಯವರ ಜವಾಬ್ದಾರಿಯಾಗಿದೆ ಎಂದು ಸಾಮ್ನಾದಲ್ಲಿ ಬರೆದಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಪ್ರಧಾನ ಮಂತ್ರಿ ಯಾವುದೇ ಒಂದು ಪಕ್ಷಕ್ಕೆ ಸೇರಿಲ್ಲ. ಇಡೀ ದೇಶವನ್ನು ಅವರು ಪ್ರತಿನಿಧಿಸುತ್ತಾರೆ. “ಮಹಾರಾಷ್ಟ್ರದ ಜನರು ತೆಗೆದುಕೊಂಡ ನಿರ್ಧಾರವನ್ನು ದೆಹಲಿ ಗೌರವಿಸಬೇಕು ಮತ್ತು ರಾಜ್ಯ ಸರ್ಕಾರದ ಸ್ಥಿರತೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು” ಎಂದು ಪಕ್ಷವು ತನ್ನ ಮುಖವಾಣಿಯಲ್ಲಿ ಹೇಳಿದೆ.

“ತ್ವರಿತ ಅಭಿವೃದ್ಧಿಗಾಗಿ ಕೇಂದ್ರವು ರಾಜ್ಯದೊಂದಿಗೆ ಸಹಕರಿಸಬೇಕಾಗುತ್ತದೆ. ಮಹಾರಾಷ್ಟ್ರದ ರೈತರನ್ನು ಅವರ ದುಃಖದಿಂದ ಹೊರಗೆ ತರಲು ಕೇಂದ್ರವು ಸಹಾಯವನ್ನು ನೀಡಬೇಕಾಗುತ್ತದೆ” ಎಂದು ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

“ದೆಹಲಿ ಖಚಿತವಾಗಿ ದೇಶದ ರಾಜಧಾನಿಯಾಗಿದೆ. ಆದರೆ ಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ ಎಂದು ದೃಢವಾದ ನಿಲುವನ್ನು ತೆಗೆದುಕೊಂಡ ಬಾಲಾಸಾಹೇಬ್ ಠಾಕ್ರೆ ಅವರ ಪುತ್ರ ಉದ್ಧವ್ ಠಾಕ್ರೆ ಈಗ ಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ, ಸರ್ಕಾರವು ಖಚಿತವಾಗಿದೆ ಅದರ ಬೆನ್ನುಮೂಳೆಯು ಗಟ್ಟಿಯಾಗಿಯೇ ಇರುತ್ತದೆ “ಎಂದು ಅದು ಹೇಳಿದೆ.

ಇದನ್ನೂ ಓದಿ: ದುರಹಂಕಾರದ ರಾಜಕೀಯ ಕೆಲಸ ಮಾಡುವುದಿಲ್ಲ, ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ: ಗೆಲುವಿನ ಬಳಿಕ ಮಮತಾ ಬ್ಯಾನರ್ಜಿ

ಉದ್ಧವ್‌ ಠಾಕ್ರೆಯವರು ಬುಧವಾರ ಸಂಜೆ ಪ್ರಧಾನಿ ಮೋದಿಯವರನ್ನು ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಮುಂಬೈಗೆ ಆಹ್ವಾನಿಸಿದ್ದರು. ಆದರೆ ಭಾಗವಹಿಸಲು ಸಾಧ್ಯವಾಗದ ಮೋದಿಯವರು “ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದ್ಧವ್‌ ಠಾಕ್ರೆಜಿ ಅವರಿಗೆ ಅಭಿನಂದನೆಗಳು. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಹೋದರತ್ವದ ಹೆಸರಿನಲ್ಲಿ ನಂಬಿಕೆ ದ್ರೋಹ ಮಾಡಿದರು ಸಹಿಸಿಕೊಂಡು ಸಹಕರಿಸಬೇಕಾ..?!! ಅಂತಹ ದರ್ದು ಬಿಜೆಪಿಗೆ ಬಂದಿಲ್ಲ..!!!

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...