Homeಮುಖಪುಟಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ: ಪ್ರಧಾನಿಯು ಸಹೋದರ ಉದ್ಧವ್‌ ಠಾಕ್ರೆಗೆ ಸಹಕರಿಸಬೇಕು - ಶಿವಸೇನೆ

ಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ: ಪ್ರಧಾನಿಯು ಸಹೋದರ ಉದ್ಧವ್‌ ಠಾಕ್ರೆಗೆ ಸಹಕರಿಸಬೇಕು – ಶಿವಸೇನೆ

- Advertisement -
- Advertisement -

ಪ್ರಧಾನಿಯು ಕಿರಿಯ ಸಹೋದರ ಉದ್ಧವ್‌ ಠಾಕ್ರೆಯವರೊಂದಿಗೆ ಸಹಕರಿಸಬೇಕು ಎಂದು ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ.

“ಬಿಜೆಪಿ-ಶಿವಸೇನೆ ಮಹಾರಾಷ್ಟ್ರ ರಾಜಕೀಯದಲ್ಲಿ ಅಷ್ಟು ಹಿತಕರವಲ್ಲದ ಸಂಬಂಧಗಳನ್ನು ಹಂಚಿಕೊಳ್ಳುತ್ತಿವೆ. ಆದರೆ ನರೇಂದ್ರ ಮೋದಿ ಮತ್ತು ಉದ್ಧವ್ ಠಾಕ್ರೆ ಸಹೋದರ ಸಂಬಂಧಿಗಳಾಗಿದ್ದಾರೆ. ಆದ್ದರಿಂದ ಮಹಾರಾಷ್ಟ್ರದ ಕಿರಿಯ ಸಹೋದರನೊಂದಿಗೆ ಪ್ರಧಾನ ಮಂತ್ರಿಯಾಗಿ ಸಹಕರಿಸುವುದು ಮೋದಿಯವರ ಜವಾಬ್ದಾರಿಯಾಗಿದೆ ಎಂದು ಸಾಮ್ನಾದಲ್ಲಿ ಬರೆದಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಪ್ರಧಾನ ಮಂತ್ರಿ ಯಾವುದೇ ಒಂದು ಪಕ್ಷಕ್ಕೆ ಸೇರಿಲ್ಲ. ಇಡೀ ದೇಶವನ್ನು ಅವರು ಪ್ರತಿನಿಧಿಸುತ್ತಾರೆ. “ಮಹಾರಾಷ್ಟ್ರದ ಜನರು ತೆಗೆದುಕೊಂಡ ನಿರ್ಧಾರವನ್ನು ದೆಹಲಿ ಗೌರವಿಸಬೇಕು ಮತ್ತು ರಾಜ್ಯ ಸರ್ಕಾರದ ಸ್ಥಿರತೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು” ಎಂದು ಪಕ್ಷವು ತನ್ನ ಮುಖವಾಣಿಯಲ್ಲಿ ಹೇಳಿದೆ.

“ತ್ವರಿತ ಅಭಿವೃದ್ಧಿಗಾಗಿ ಕೇಂದ್ರವು ರಾಜ್ಯದೊಂದಿಗೆ ಸಹಕರಿಸಬೇಕಾಗುತ್ತದೆ. ಮಹಾರಾಷ್ಟ್ರದ ರೈತರನ್ನು ಅವರ ದುಃಖದಿಂದ ಹೊರಗೆ ತರಲು ಕೇಂದ್ರವು ಸಹಾಯವನ್ನು ನೀಡಬೇಕಾಗುತ್ತದೆ” ಎಂದು ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

“ದೆಹಲಿ ಖಚಿತವಾಗಿ ದೇಶದ ರಾಜಧಾನಿಯಾಗಿದೆ. ಆದರೆ ಮಹಾರಾಷ್ಟ್ರ ದೆಹಲಿಯ ಗುಲಾಮ ಅಲ್ಲ ಎಂದು ದೃಢವಾದ ನಿಲುವನ್ನು ತೆಗೆದುಕೊಂಡ ಬಾಲಾಸಾಹೇಬ್ ಠಾಕ್ರೆ ಅವರ ಪುತ್ರ ಉದ್ಧವ್ ಠಾಕ್ರೆ ಈಗ ಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ, ಸರ್ಕಾರವು ಖಚಿತವಾಗಿದೆ ಅದರ ಬೆನ್ನುಮೂಳೆಯು ಗಟ್ಟಿಯಾಗಿಯೇ ಇರುತ್ತದೆ “ಎಂದು ಅದು ಹೇಳಿದೆ.

ಇದನ್ನೂ ಓದಿ: ದುರಹಂಕಾರದ ರಾಜಕೀಯ ಕೆಲಸ ಮಾಡುವುದಿಲ್ಲ, ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ: ಗೆಲುವಿನ ಬಳಿಕ ಮಮತಾ ಬ್ಯಾನರ್ಜಿ

ಉದ್ಧವ್‌ ಠಾಕ್ರೆಯವರು ಬುಧವಾರ ಸಂಜೆ ಪ್ರಧಾನಿ ಮೋದಿಯವರನ್ನು ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಮುಂಬೈಗೆ ಆಹ್ವಾನಿಸಿದ್ದರು. ಆದರೆ ಭಾಗವಹಿಸಲು ಸಾಧ್ಯವಾಗದ ಮೋದಿಯವರು “ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದ್ಧವ್‌ ಠಾಕ್ರೆಜಿ ಅವರಿಗೆ ಅಭಿನಂದನೆಗಳು. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಹೋದರತ್ವದ ಹೆಸರಿನಲ್ಲಿ ನಂಬಿಕೆ ದ್ರೋಹ ಮಾಡಿದರು ಸಹಿಸಿಕೊಂಡು ಸಹಕರಿಸಬೇಕಾ..?!! ಅಂತಹ ದರ್ದು ಬಿಜೆಪಿಗೆ ಬಂದಿಲ್ಲ..!!!

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...