Homeಕರ್ನಾಟಕಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

- Advertisement -
- Advertisement -

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳುತ್ತಿದ್ದಂತೆ, ಅವರ ಹೆಲಿಕಾಪ್ಟರ್‍ನಿಂದ ಭಾರದ ಸೂಟ್‍ಕೇಸ್ ಒಂದನ್ನು ಇಳಿಸಲಾಗಿದೆ. ಒಬ್ಬರಲ್ಲಾ ಇಬ್ಬರು ವ್ಯಕ್ತಿಗಳು ಅದನ್ನು ಕಷ್ಟಪಟ್ಟು ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿದರೆ, ಅದು ಬಹಳ ಭಾರ ಇರುವುದು ಗೊತ್ತಾಗುತ್ತದೆ. ಆ ಸೂಟ್‍ಕೇಸನ್ನು ನಂತರ ಒಂದು ಇನ್ನೋವಾ ಕಾರಿನಲ್ಲಿ ಇಡಲಾಗುತ್ತದೆ. ಕೂಡಲೇ ಕಾರು ವೇಗವಾಗಿ ಅಲ್ಲಿಂದ ತೆರಳುತ್ತದೆ.

ಇದರಿಂದ ಎದ್ದಿರುವ ಪ್ರಶ್ನೆಗಳಿಗೆ ಇದುವರೆಗೆ ಬಿಜೆಪಿ ಪಕ್ಷವಾಗಲೀ, ಚುನಾವಣಾ ಆಯೋಗವಾಗಲಿ ಉತ್ತರಿಸಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತ ಹೆಚ್ಚು ಬಾರಿ ಅದನ್ನು ತಡೆದು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ‘ಎಷ್ಟು ಬೇಕಾದರೂ ಚೆಕ್ ಮಾಡಿ’ ಎಂದು ಮುಖ್ಯಮಂತ್ರಿಗಳು ಸಿಟ್ಟಿನಿಂದ ಹೇಳಿದರೆಂದು ವರದಿಯಾಗಿದೆ.

ಆದರೆ, ಇದೀಗ ಮೋದಿಯವರ ಹೆಲಿಕಾಪ್ಟರ್‍ನಿಂದ ಇಳಿಸಲಾದ ಭಾರದ ಸೂಟ್‍ಕೇಸ್ ಮತ್ತು ಇನ್ನೋವಾ ಕಾರನ್ನು ತಪಾಸಣೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಮೋದಿ ಬಂದಾಗ ಬೆಂಗಾವಲು ಪಡೆ ವಾಹನದಿಂದ ಖಾಸಗಿ ವಾಹನಕ್ಕೆ ರಹಸ್ಯ ಸೂಟ್ ಕೇಸ್ ಗಡಿಬಿಡಿಯಲ್ಲಿ ಟ್ರಾನ್ಸಫರ್! ಚುನಾವಣೆಗೆ ದುಡ್ಡು ಸಪ್ಲೈ ಮಾಡಲು ಮೋದಿಯಿಂದ ಬೆಂಗಾವಲು ಪಡೆ ದುರುಪಯೋಗ?

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, १३ एप्रिल, २०१९

ಕಳೆದ ತಿಂಗಳು ಪ್ರಜಾವಾಣಿ ಪತ್ರಿಕೆಯಲ್ಲಿ ‘ಚುನಾವಣಾ ಸಂದರ್ಭದಲ್ಲಿ ಹಣವನ್ನು ಹೇಗೆ ಸಾಗಿಸಲಾಗುತ್ತದೆ’ ಎಂಬ ಕುರಿತು ವಿವರವಾದ ವರದಿ ಪ್ರಕಟವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇನ್ನೊಬ್ಬ ಪೊಲೀಸ್ ಅಧಿಕಾರಿ ಹಣ ಸಾಗಿಸುವ ಜವಾಬ್ದಾರಿ ಹೊತ್ತುಕೊಂಡಿದ್ದರು ಎಂದು ಅದರಲ್ಲಿ ಹೇಳಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ದಾಟಿ ಅಧಿಕಾರದಲ್ಲಿರುವ ದೊಡ್ಡ ನಾಯಕರುಗಳೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಅನುಮಾನ ಉದ್ಭವಿಸುತ್ತದೆ. ಅದೇ ಸಂದರ್ಭದಲ್ಲಿ ಸಿಎಂಗೆ ಒಂದು ರೀತಿಯಲ್ಲಿ, ಪಿಎಂಗೆ ಇನ್ನೊಂದು ರೀತಿಯಲ್ಲಿ ಚುನಾವಣಾ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರಾ ಎಂಬುದು ಸಹಜವಾಗಿಯೇ ಮೂಡಿಬರುವ ಪ್ರಶ್ನೆ.

ಆದರೆ, ಅಂತಿಮ ಅಭಿಪ್ರಾಯಕ್ಕೆ ಬರುವ ಮುಂಚೆ ಯಾವುದಕ್ಕೂ ಬಿಜೆಪಿಯ ವತಿಯಿಂದ ಅಥವಾ ಚುನಾವಣಾ ಆಯೋಗದದ ವತಿಯಿಂದ ಸ್ಪಷ್ಟೀಕರಣ ಬರುತ್ತದಾ ಕಾದು ನೋಡಬೇಕು. ಈ ಕುರಿತು ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡುರಾವ್ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

 

ಅಪ್‌ಡೇಟ್: 14.04.2019

ಚಿತ್ರದುರ್ಗದಲ್ಲಿ ಮೋದಿಯವರ ಹೆಲಿಕಾಪ್ಟರ್ ಜೊತೆಗೆ ಬಂದ ಸೂಟ್‌ಕೇಸ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ನಿನ್ನೆ ದೂರು ನೀಡಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್ ಅದು ಭದ್ರತೆಗೆ ಸಂಬಂಧಿಸಿದ್ದು ಎಂದು ಸಂಬಂಧಪಟ್ಟ ಇಲಾಖೆಯವರು ಹೇಳಿದ್ದಾರೆ. ಆದರೆ, ಅದನ್ನು ಪರಿಶೀಲಿಸಿ ತಪಾಸಣೆ ನಡೆಸಬೇಕಾದದ್ದು ಪೊಲೀಸರಲ್ಲ, ಚುನಾವಣಾಧಿಕಾರಿಗಳು. ನೀವು ಹೆಚ್ಚಿನ ಮಾಹಿತಿಗೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಯವರನ್ನು ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿಗಳಿಂದ ಇನ್ನೂ ಹೇಳಿಕೆ ಹೊರಬಿದ್ದಿಲ್ಲ.

ಈ ಮಧ್ಯೆ ಬಿಜೆಪಿಯು ಹೇಳಿಕೆ ನೀಡಿ, ಆ ಬಾಕ್ಸ್‌ನಲ್ಲಿ ಮೋದಿಯವರು ಭಾಷಣ ಮಾಡುವಾಗ ವೇದಿಕೆಯ ಮೇಲೆ ಬಳಸಲಾಗುವ ಉಪಕರಣಗಳಿರುತ್ತವೆ ಎಂದಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ದೆಹಲಿಯಲ್ಲಿ ಹೇಳಿಕೆ ನೀಡಿ ಆ ಬಾಕ್ಸ್‌ಅನ್ನು ಖಾಸಗಿ ವಾಹನದಲ್ಲಿ ಏಕೆ ತೆಗೆದುಕೊಂಡು ಹೋಗಲಾಯಿತು? ಅದು ಪ್ರಧಾನಿಯ ಎಸ್‌ಪಿಜಿ ಪ್ರೋಟೋಕಾಲ್‌ನ ಭಾಗ ಏಕೆ ಆಗಿರಲಿಲ್ಲ? ಈ ಕುರಿತು ಎಸ್‌ಪಿಜಿ ಉತ್ತರ ನೀಡಬೇಕು ಎಂದಿದ್ದಾರೆ.

ಮೊಟ್ಟಮೊದಲು ಕಾಂಗ್ರೆಸ್‌ನ ಕೇಂದ್ರೀಯ ಐಟಿ ವಿಭಾಗದ ಶ್ರೀವತ್ಸ ಇದನ್ನು ಏಪ್ರಿಲ್ 12ರಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...