Homeಕರ್ನಾಟಕಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

- Advertisement -
- Advertisement -

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳುತ್ತಿದ್ದಂತೆ, ಅವರ ಹೆಲಿಕಾಪ್ಟರ್‍ನಿಂದ ಭಾರದ ಸೂಟ್‍ಕೇಸ್ ಒಂದನ್ನು ಇಳಿಸಲಾಗಿದೆ. ಒಬ್ಬರಲ್ಲಾ ಇಬ್ಬರು ವ್ಯಕ್ತಿಗಳು ಅದನ್ನು ಕಷ್ಟಪಟ್ಟು ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿದರೆ, ಅದು ಬಹಳ ಭಾರ ಇರುವುದು ಗೊತ್ತಾಗುತ್ತದೆ. ಆ ಸೂಟ್‍ಕೇಸನ್ನು ನಂತರ ಒಂದು ಇನ್ನೋವಾ ಕಾರಿನಲ್ಲಿ ಇಡಲಾಗುತ್ತದೆ. ಕೂಡಲೇ ಕಾರು ವೇಗವಾಗಿ ಅಲ್ಲಿಂದ ತೆರಳುತ್ತದೆ.

ಇದರಿಂದ ಎದ್ದಿರುವ ಪ್ರಶ್ನೆಗಳಿಗೆ ಇದುವರೆಗೆ ಬಿಜೆಪಿ ಪಕ್ಷವಾಗಲೀ, ಚುನಾವಣಾ ಆಯೋಗವಾಗಲಿ ಉತ್ತರಿಸಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತ ಹೆಚ್ಚು ಬಾರಿ ಅದನ್ನು ತಡೆದು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ‘ಎಷ್ಟು ಬೇಕಾದರೂ ಚೆಕ್ ಮಾಡಿ’ ಎಂದು ಮುಖ್ಯಮಂತ್ರಿಗಳು ಸಿಟ್ಟಿನಿಂದ ಹೇಳಿದರೆಂದು ವರದಿಯಾಗಿದೆ.

ಆದರೆ, ಇದೀಗ ಮೋದಿಯವರ ಹೆಲಿಕಾಪ್ಟರ್‍ನಿಂದ ಇಳಿಸಲಾದ ಭಾರದ ಸೂಟ್‍ಕೇಸ್ ಮತ್ತು ಇನ್ನೋವಾ ಕಾರನ್ನು ತಪಾಸಣೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಮೋದಿ ಬಂದಾಗ ಬೆಂಗಾವಲು ಪಡೆ ವಾಹನದಿಂದ ಖಾಸಗಿ ವಾಹನಕ್ಕೆ ರಹಸ್ಯ ಸೂಟ್ ಕೇಸ್ ಗಡಿಬಿಡಿಯಲ್ಲಿ ಟ್ರಾನ್ಸಫರ್! ಚುನಾವಣೆಗೆ ದುಡ್ಡು ಸಪ್ಲೈ ಮಾಡಲು ಮೋದಿಯಿಂದ ಬೆಂಗಾವಲು ಪಡೆ ದುರುಪಯೋಗ?

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, १३ एप्रिल, २०१९

ಕಳೆದ ತಿಂಗಳು ಪ್ರಜಾವಾಣಿ ಪತ್ರಿಕೆಯಲ್ಲಿ ‘ಚುನಾವಣಾ ಸಂದರ್ಭದಲ್ಲಿ ಹಣವನ್ನು ಹೇಗೆ ಸಾಗಿಸಲಾಗುತ್ತದೆ’ ಎಂಬ ಕುರಿತು ವಿವರವಾದ ವರದಿ ಪ್ರಕಟವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇನ್ನೊಬ್ಬ ಪೊಲೀಸ್ ಅಧಿಕಾರಿ ಹಣ ಸಾಗಿಸುವ ಜವಾಬ್ದಾರಿ ಹೊತ್ತುಕೊಂಡಿದ್ದರು ಎಂದು ಅದರಲ್ಲಿ ಹೇಳಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ದಾಟಿ ಅಧಿಕಾರದಲ್ಲಿರುವ ದೊಡ್ಡ ನಾಯಕರುಗಳೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಅನುಮಾನ ಉದ್ಭವಿಸುತ್ತದೆ. ಅದೇ ಸಂದರ್ಭದಲ್ಲಿ ಸಿಎಂಗೆ ಒಂದು ರೀತಿಯಲ್ಲಿ, ಪಿಎಂಗೆ ಇನ್ನೊಂದು ರೀತಿಯಲ್ಲಿ ಚುನಾವಣಾ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರಾ ಎಂಬುದು ಸಹಜವಾಗಿಯೇ ಮೂಡಿಬರುವ ಪ್ರಶ್ನೆ.

ಆದರೆ, ಅಂತಿಮ ಅಭಿಪ್ರಾಯಕ್ಕೆ ಬರುವ ಮುಂಚೆ ಯಾವುದಕ್ಕೂ ಬಿಜೆಪಿಯ ವತಿಯಿಂದ ಅಥವಾ ಚುನಾವಣಾ ಆಯೋಗದದ ವತಿಯಿಂದ ಸ್ಪಷ್ಟೀಕರಣ ಬರುತ್ತದಾ ಕಾದು ನೋಡಬೇಕು. ಈ ಕುರಿತು ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡುರಾವ್ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

 

ಅಪ್‌ಡೇಟ್: 14.04.2019

ಚಿತ್ರದುರ್ಗದಲ್ಲಿ ಮೋದಿಯವರ ಹೆಲಿಕಾಪ್ಟರ್ ಜೊತೆಗೆ ಬಂದ ಸೂಟ್‌ಕೇಸ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ನಿನ್ನೆ ದೂರು ನೀಡಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್ ಅದು ಭದ್ರತೆಗೆ ಸಂಬಂಧಿಸಿದ್ದು ಎಂದು ಸಂಬಂಧಪಟ್ಟ ಇಲಾಖೆಯವರು ಹೇಳಿದ್ದಾರೆ. ಆದರೆ, ಅದನ್ನು ಪರಿಶೀಲಿಸಿ ತಪಾಸಣೆ ನಡೆಸಬೇಕಾದದ್ದು ಪೊಲೀಸರಲ್ಲ, ಚುನಾವಣಾಧಿಕಾರಿಗಳು. ನೀವು ಹೆಚ್ಚಿನ ಮಾಹಿತಿಗೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಯವರನ್ನು ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿಗಳಿಂದ ಇನ್ನೂ ಹೇಳಿಕೆ ಹೊರಬಿದ್ದಿಲ್ಲ.

ಈ ಮಧ್ಯೆ ಬಿಜೆಪಿಯು ಹೇಳಿಕೆ ನೀಡಿ, ಆ ಬಾಕ್ಸ್‌ನಲ್ಲಿ ಮೋದಿಯವರು ಭಾಷಣ ಮಾಡುವಾಗ ವೇದಿಕೆಯ ಮೇಲೆ ಬಳಸಲಾಗುವ ಉಪಕರಣಗಳಿರುತ್ತವೆ ಎಂದಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ದೆಹಲಿಯಲ್ಲಿ ಹೇಳಿಕೆ ನೀಡಿ ಆ ಬಾಕ್ಸ್‌ಅನ್ನು ಖಾಸಗಿ ವಾಹನದಲ್ಲಿ ಏಕೆ ತೆಗೆದುಕೊಂಡು ಹೋಗಲಾಯಿತು? ಅದು ಪ್ರಧಾನಿಯ ಎಸ್‌ಪಿಜಿ ಪ್ರೋಟೋಕಾಲ್‌ನ ಭಾಗ ಏಕೆ ಆಗಿರಲಿಲ್ಲ? ಈ ಕುರಿತು ಎಸ್‌ಪಿಜಿ ಉತ್ತರ ನೀಡಬೇಕು ಎಂದಿದ್ದಾರೆ.

ಮೊಟ್ಟಮೊದಲು ಕಾಂಗ್ರೆಸ್‌ನ ಕೇಂದ್ರೀಯ ಐಟಿ ವಿಭಾಗದ ಶ್ರೀವತ್ಸ ಇದನ್ನು ಏಪ್ರಿಲ್ 12ರಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...