Homeಕರ್ನಾಟಕಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

- Advertisement -
- Advertisement -

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳುತ್ತಿದ್ದಂತೆ, ಅವರ ಹೆಲಿಕಾಪ್ಟರ್‍ನಿಂದ ಭಾರದ ಸೂಟ್‍ಕೇಸ್ ಒಂದನ್ನು ಇಳಿಸಲಾಗಿದೆ. ಒಬ್ಬರಲ್ಲಾ ಇಬ್ಬರು ವ್ಯಕ್ತಿಗಳು ಅದನ್ನು ಕಷ್ಟಪಟ್ಟು ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿದರೆ, ಅದು ಬಹಳ ಭಾರ ಇರುವುದು ಗೊತ್ತಾಗುತ್ತದೆ. ಆ ಸೂಟ್‍ಕೇಸನ್ನು ನಂತರ ಒಂದು ಇನ್ನೋವಾ ಕಾರಿನಲ್ಲಿ ಇಡಲಾಗುತ್ತದೆ. ಕೂಡಲೇ ಕಾರು ವೇಗವಾಗಿ ಅಲ್ಲಿಂದ ತೆರಳುತ್ತದೆ.

ಇದರಿಂದ ಎದ್ದಿರುವ ಪ್ರಶ್ನೆಗಳಿಗೆ ಇದುವರೆಗೆ ಬಿಜೆಪಿ ಪಕ್ಷವಾಗಲೀ, ಚುನಾವಣಾ ಆಯೋಗವಾಗಲಿ ಉತ್ತರಿಸಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತ ಹೆಚ್ಚು ಬಾರಿ ಅದನ್ನು ತಡೆದು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ‘ಎಷ್ಟು ಬೇಕಾದರೂ ಚೆಕ್ ಮಾಡಿ’ ಎಂದು ಮುಖ್ಯಮಂತ್ರಿಗಳು ಸಿಟ್ಟಿನಿಂದ ಹೇಳಿದರೆಂದು ವರದಿಯಾಗಿದೆ.

ಆದರೆ, ಇದೀಗ ಮೋದಿಯವರ ಹೆಲಿಕಾಪ್ಟರ್‍ನಿಂದ ಇಳಿಸಲಾದ ಭಾರದ ಸೂಟ್‍ಕೇಸ್ ಮತ್ತು ಇನ್ನೋವಾ ಕಾರನ್ನು ತಪಾಸಣೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಮೋದಿ ಬಂದಾಗ ಬೆಂಗಾವಲು ಪಡೆ ವಾಹನದಿಂದ ಖಾಸಗಿ ವಾಹನಕ್ಕೆ ರಹಸ್ಯ ಸೂಟ್ ಕೇಸ್ ಗಡಿಬಿಡಿಯಲ್ಲಿ ಟ್ರಾನ್ಸಫರ್! ಚುನಾವಣೆಗೆ ದುಡ್ಡು ಸಪ್ಲೈ ಮಾಡಲು ಮೋದಿಯಿಂದ ಬೆಂಗಾವಲು ಪಡೆ ದುರುಪಯೋಗ?

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, १३ एप्रिल, २०१९

ಕಳೆದ ತಿಂಗಳು ಪ್ರಜಾವಾಣಿ ಪತ್ರಿಕೆಯಲ್ಲಿ ‘ಚುನಾವಣಾ ಸಂದರ್ಭದಲ್ಲಿ ಹಣವನ್ನು ಹೇಗೆ ಸಾಗಿಸಲಾಗುತ್ತದೆ’ ಎಂಬ ಕುರಿತು ವಿವರವಾದ ವರದಿ ಪ್ರಕಟವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇನ್ನೊಬ್ಬ ಪೊಲೀಸ್ ಅಧಿಕಾರಿ ಹಣ ಸಾಗಿಸುವ ಜವಾಬ್ದಾರಿ ಹೊತ್ತುಕೊಂಡಿದ್ದರು ಎಂದು ಅದರಲ್ಲಿ ಹೇಳಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ದಾಟಿ ಅಧಿಕಾರದಲ್ಲಿರುವ ದೊಡ್ಡ ನಾಯಕರುಗಳೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಅನುಮಾನ ಉದ್ಭವಿಸುತ್ತದೆ. ಅದೇ ಸಂದರ್ಭದಲ್ಲಿ ಸಿಎಂಗೆ ಒಂದು ರೀತಿಯಲ್ಲಿ, ಪಿಎಂಗೆ ಇನ್ನೊಂದು ರೀತಿಯಲ್ಲಿ ಚುನಾವಣಾ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರಾ ಎಂಬುದು ಸಹಜವಾಗಿಯೇ ಮೂಡಿಬರುವ ಪ್ರಶ್ನೆ.

ಆದರೆ, ಅಂತಿಮ ಅಭಿಪ್ರಾಯಕ್ಕೆ ಬರುವ ಮುಂಚೆ ಯಾವುದಕ್ಕೂ ಬಿಜೆಪಿಯ ವತಿಯಿಂದ ಅಥವಾ ಚುನಾವಣಾ ಆಯೋಗದದ ವತಿಯಿಂದ ಸ್ಪಷ್ಟೀಕರಣ ಬರುತ್ತದಾ ಕಾದು ನೋಡಬೇಕು. ಈ ಕುರಿತು ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡುರಾವ್ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

 

ಅಪ್‌ಡೇಟ್: 14.04.2019

ಚಿತ್ರದುರ್ಗದಲ್ಲಿ ಮೋದಿಯವರ ಹೆಲಿಕಾಪ್ಟರ್ ಜೊತೆಗೆ ಬಂದ ಸೂಟ್‌ಕೇಸ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ನಿನ್ನೆ ದೂರು ನೀಡಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್ ಅದು ಭದ್ರತೆಗೆ ಸಂಬಂಧಿಸಿದ್ದು ಎಂದು ಸಂಬಂಧಪಟ್ಟ ಇಲಾಖೆಯವರು ಹೇಳಿದ್ದಾರೆ. ಆದರೆ, ಅದನ್ನು ಪರಿಶೀಲಿಸಿ ತಪಾಸಣೆ ನಡೆಸಬೇಕಾದದ್ದು ಪೊಲೀಸರಲ್ಲ, ಚುನಾವಣಾಧಿಕಾರಿಗಳು. ನೀವು ಹೆಚ್ಚಿನ ಮಾಹಿತಿಗೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಯವರನ್ನು ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿಗಳಿಂದ ಇನ್ನೂ ಹೇಳಿಕೆ ಹೊರಬಿದ್ದಿಲ್ಲ.

ಈ ಮಧ್ಯೆ ಬಿಜೆಪಿಯು ಹೇಳಿಕೆ ನೀಡಿ, ಆ ಬಾಕ್ಸ್‌ನಲ್ಲಿ ಮೋದಿಯವರು ಭಾಷಣ ಮಾಡುವಾಗ ವೇದಿಕೆಯ ಮೇಲೆ ಬಳಸಲಾಗುವ ಉಪಕರಣಗಳಿರುತ್ತವೆ ಎಂದಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ದೆಹಲಿಯಲ್ಲಿ ಹೇಳಿಕೆ ನೀಡಿ ಆ ಬಾಕ್ಸ್‌ಅನ್ನು ಖಾಸಗಿ ವಾಹನದಲ್ಲಿ ಏಕೆ ತೆಗೆದುಕೊಂಡು ಹೋಗಲಾಯಿತು? ಅದು ಪ್ರಧಾನಿಯ ಎಸ್‌ಪಿಜಿ ಪ್ರೋಟೋಕಾಲ್‌ನ ಭಾಗ ಏಕೆ ಆಗಿರಲಿಲ್ಲ? ಈ ಕುರಿತು ಎಸ್‌ಪಿಜಿ ಉತ್ತರ ನೀಡಬೇಕು ಎಂದಿದ್ದಾರೆ.

ಮೊಟ್ಟಮೊದಲು ಕಾಂಗ್ರೆಸ್‌ನ ಕೇಂದ್ರೀಯ ಐಟಿ ವಿಭಾಗದ ಶ್ರೀವತ್ಸ ಇದನ್ನು ಏಪ್ರಿಲ್ 12ರಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...