Homeಕರ್ನಾಟಕಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

- Advertisement -
- Advertisement -

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳುತ್ತಿದ್ದಂತೆ, ಅವರ ಹೆಲಿಕಾಪ್ಟರ್‍ನಿಂದ ಭಾರದ ಸೂಟ್‍ಕೇಸ್ ಒಂದನ್ನು ಇಳಿಸಲಾಗಿದೆ. ಒಬ್ಬರಲ್ಲಾ ಇಬ್ಬರು ವ್ಯಕ್ತಿಗಳು ಅದನ್ನು ಕಷ್ಟಪಟ್ಟು ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿದರೆ, ಅದು ಬಹಳ ಭಾರ ಇರುವುದು ಗೊತ್ತಾಗುತ್ತದೆ. ಆ ಸೂಟ್‍ಕೇಸನ್ನು ನಂತರ ಒಂದು ಇನ್ನೋವಾ ಕಾರಿನಲ್ಲಿ ಇಡಲಾಗುತ್ತದೆ. ಕೂಡಲೇ ಕಾರು ವೇಗವಾಗಿ ಅಲ್ಲಿಂದ ತೆರಳುತ್ತದೆ.

ಇದರಿಂದ ಎದ್ದಿರುವ ಪ್ರಶ್ನೆಗಳಿಗೆ ಇದುವರೆಗೆ ಬಿಜೆಪಿ ಪಕ್ಷವಾಗಲೀ, ಚುನಾವಣಾ ಆಯೋಗವಾಗಲಿ ಉತ್ತರಿಸಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತ ಹೆಚ್ಚು ಬಾರಿ ಅದನ್ನು ತಡೆದು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ‘ಎಷ್ಟು ಬೇಕಾದರೂ ಚೆಕ್ ಮಾಡಿ’ ಎಂದು ಮುಖ್ಯಮಂತ್ರಿಗಳು ಸಿಟ್ಟಿನಿಂದ ಹೇಳಿದರೆಂದು ವರದಿಯಾಗಿದೆ.

ಆದರೆ, ಇದೀಗ ಮೋದಿಯವರ ಹೆಲಿಕಾಪ್ಟರ್‍ನಿಂದ ಇಳಿಸಲಾದ ಭಾರದ ಸೂಟ್‍ಕೇಸ್ ಮತ್ತು ಇನ್ನೋವಾ ಕಾರನ್ನು ತಪಾಸಣೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಮೋದಿ ಬಂದಾಗ ಬೆಂಗಾವಲು ಪಡೆ ವಾಹನದಿಂದ ಖಾಸಗಿ ವಾಹನಕ್ಕೆ ರಹಸ್ಯ ಸೂಟ್ ಕೇಸ್ ಗಡಿಬಿಡಿಯಲ್ಲಿ ಟ್ರಾನ್ಸಫರ್! ಚುನಾವಣೆಗೆ ದುಡ್ಡು ಸಪ್ಲೈ ಮಾಡಲು ಮೋದಿಯಿಂದ ಬೆಂಗಾವಲು ಪಡೆ ದುರುಪಯೋಗ?

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, १३ एप्रिल, २०१९

ಕಳೆದ ತಿಂಗಳು ಪ್ರಜಾವಾಣಿ ಪತ್ರಿಕೆಯಲ್ಲಿ ‘ಚುನಾವಣಾ ಸಂದರ್ಭದಲ್ಲಿ ಹಣವನ್ನು ಹೇಗೆ ಸಾಗಿಸಲಾಗುತ್ತದೆ’ ಎಂಬ ಕುರಿತು ವಿವರವಾದ ವರದಿ ಪ್ರಕಟವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇನ್ನೊಬ್ಬ ಪೊಲೀಸ್ ಅಧಿಕಾರಿ ಹಣ ಸಾಗಿಸುವ ಜವಾಬ್ದಾರಿ ಹೊತ್ತುಕೊಂಡಿದ್ದರು ಎಂದು ಅದರಲ್ಲಿ ಹೇಳಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ದಾಟಿ ಅಧಿಕಾರದಲ್ಲಿರುವ ದೊಡ್ಡ ನಾಯಕರುಗಳೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಅನುಮಾನ ಉದ್ಭವಿಸುತ್ತದೆ. ಅದೇ ಸಂದರ್ಭದಲ್ಲಿ ಸಿಎಂಗೆ ಒಂದು ರೀತಿಯಲ್ಲಿ, ಪಿಎಂಗೆ ಇನ್ನೊಂದು ರೀತಿಯಲ್ಲಿ ಚುನಾವಣಾ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರಾ ಎಂಬುದು ಸಹಜವಾಗಿಯೇ ಮೂಡಿಬರುವ ಪ್ರಶ್ನೆ.

ಆದರೆ, ಅಂತಿಮ ಅಭಿಪ್ರಾಯಕ್ಕೆ ಬರುವ ಮುಂಚೆ ಯಾವುದಕ್ಕೂ ಬಿಜೆಪಿಯ ವತಿಯಿಂದ ಅಥವಾ ಚುನಾವಣಾ ಆಯೋಗದದ ವತಿಯಿಂದ ಸ್ಪಷ್ಟೀಕರಣ ಬರುತ್ತದಾ ಕಾದು ನೋಡಬೇಕು. ಈ ಕುರಿತು ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡುರಾವ್ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

 

ಅಪ್‌ಡೇಟ್: 14.04.2019

ಚಿತ್ರದುರ್ಗದಲ್ಲಿ ಮೋದಿಯವರ ಹೆಲಿಕಾಪ್ಟರ್ ಜೊತೆಗೆ ಬಂದ ಸೂಟ್‌ಕೇಸ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ನಿನ್ನೆ ದೂರು ನೀಡಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್ ಅದು ಭದ್ರತೆಗೆ ಸಂಬಂಧಿಸಿದ್ದು ಎಂದು ಸಂಬಂಧಪಟ್ಟ ಇಲಾಖೆಯವರು ಹೇಳಿದ್ದಾರೆ. ಆದರೆ, ಅದನ್ನು ಪರಿಶೀಲಿಸಿ ತಪಾಸಣೆ ನಡೆಸಬೇಕಾದದ್ದು ಪೊಲೀಸರಲ್ಲ, ಚುನಾವಣಾಧಿಕಾರಿಗಳು. ನೀವು ಹೆಚ್ಚಿನ ಮಾಹಿತಿಗೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಯವರನ್ನು ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿಗಳಿಂದ ಇನ್ನೂ ಹೇಳಿಕೆ ಹೊರಬಿದ್ದಿಲ್ಲ.

ಈ ಮಧ್ಯೆ ಬಿಜೆಪಿಯು ಹೇಳಿಕೆ ನೀಡಿ, ಆ ಬಾಕ್ಸ್‌ನಲ್ಲಿ ಮೋದಿಯವರು ಭಾಷಣ ಮಾಡುವಾಗ ವೇದಿಕೆಯ ಮೇಲೆ ಬಳಸಲಾಗುವ ಉಪಕರಣಗಳಿರುತ್ತವೆ ಎಂದಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ದೆಹಲಿಯಲ್ಲಿ ಹೇಳಿಕೆ ನೀಡಿ ಆ ಬಾಕ್ಸ್‌ಅನ್ನು ಖಾಸಗಿ ವಾಹನದಲ್ಲಿ ಏಕೆ ತೆಗೆದುಕೊಂಡು ಹೋಗಲಾಯಿತು? ಅದು ಪ್ರಧಾನಿಯ ಎಸ್‌ಪಿಜಿ ಪ್ರೋಟೋಕಾಲ್‌ನ ಭಾಗ ಏಕೆ ಆಗಿರಲಿಲ್ಲ? ಈ ಕುರಿತು ಎಸ್‌ಪಿಜಿ ಉತ್ತರ ನೀಡಬೇಕು ಎಂದಿದ್ದಾರೆ.

ಮೊಟ್ಟಮೊದಲು ಕಾಂಗ್ರೆಸ್‌ನ ಕೇಂದ್ರೀಯ ಐಟಿ ವಿಭಾಗದ ಶ್ರೀವತ್ಸ ಇದನ್ನು ಏಪ್ರಿಲ್ 12ರಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...