Homeಕರ್ನಾಟಕಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

- Advertisement -
- Advertisement -

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳುತ್ತಿದ್ದಂತೆ, ಅವರ ಹೆಲಿಕಾಪ್ಟರ್‍ನಿಂದ ಭಾರದ ಸೂಟ್‍ಕೇಸ್ ಒಂದನ್ನು ಇಳಿಸಲಾಗಿದೆ. ಒಬ್ಬರಲ್ಲಾ ಇಬ್ಬರು ವ್ಯಕ್ತಿಗಳು ಅದನ್ನು ಕಷ್ಟಪಟ್ಟು ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿದರೆ, ಅದು ಬಹಳ ಭಾರ ಇರುವುದು ಗೊತ್ತಾಗುತ್ತದೆ. ಆ ಸೂಟ್‍ಕೇಸನ್ನು ನಂತರ ಒಂದು ಇನ್ನೋವಾ ಕಾರಿನಲ್ಲಿ ಇಡಲಾಗುತ್ತದೆ. ಕೂಡಲೇ ಕಾರು ವೇಗವಾಗಿ ಅಲ್ಲಿಂದ ತೆರಳುತ್ತದೆ.

ಇದರಿಂದ ಎದ್ದಿರುವ ಪ್ರಶ್ನೆಗಳಿಗೆ ಇದುವರೆಗೆ ಬಿಜೆಪಿ ಪಕ್ಷವಾಗಲೀ, ಚುನಾವಣಾ ಆಯೋಗವಾಗಲಿ ಉತ್ತರಿಸಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತ ಹೆಚ್ಚು ಬಾರಿ ಅದನ್ನು ತಡೆದು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ‘ಎಷ್ಟು ಬೇಕಾದರೂ ಚೆಕ್ ಮಾಡಿ’ ಎಂದು ಮುಖ್ಯಮಂತ್ರಿಗಳು ಸಿಟ್ಟಿನಿಂದ ಹೇಳಿದರೆಂದು ವರದಿಯಾಗಿದೆ.

ಆದರೆ, ಇದೀಗ ಮೋದಿಯವರ ಹೆಲಿಕಾಪ್ಟರ್‍ನಿಂದ ಇಳಿಸಲಾದ ಭಾರದ ಸೂಟ್‍ಕೇಸ್ ಮತ್ತು ಇನ್ನೋವಾ ಕಾರನ್ನು ತಪಾಸಣೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಮೋದಿ ಬಂದಾಗ ಬೆಂಗಾವಲು ಪಡೆ ವಾಹನದಿಂದ ಖಾಸಗಿ ವಾಹನಕ್ಕೆ ರಹಸ್ಯ ಸೂಟ್ ಕೇಸ್ ಗಡಿಬಿಡಿಯಲ್ಲಿ ಟ್ರಾನ್ಸಫರ್! ಚುನಾವಣೆಗೆ ದುಡ್ಡು ಸಪ್ಲೈ ಮಾಡಲು ಮೋದಿಯಿಂದ ಬೆಂಗಾವಲು ಪಡೆ ದುರುಪಯೋಗ?

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, १३ एप्रिल, २०१९

ಕಳೆದ ತಿಂಗಳು ಪ್ರಜಾವಾಣಿ ಪತ್ರಿಕೆಯಲ್ಲಿ ‘ಚುನಾವಣಾ ಸಂದರ್ಭದಲ್ಲಿ ಹಣವನ್ನು ಹೇಗೆ ಸಾಗಿಸಲಾಗುತ್ತದೆ’ ಎಂಬ ಕುರಿತು ವಿವರವಾದ ವರದಿ ಪ್ರಕಟವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇನ್ನೊಬ್ಬ ಪೊಲೀಸ್ ಅಧಿಕಾರಿ ಹಣ ಸಾಗಿಸುವ ಜವಾಬ್ದಾರಿ ಹೊತ್ತುಕೊಂಡಿದ್ದರು ಎಂದು ಅದರಲ್ಲಿ ಹೇಳಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ದಾಟಿ ಅಧಿಕಾರದಲ್ಲಿರುವ ದೊಡ್ಡ ನಾಯಕರುಗಳೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಅನುಮಾನ ಉದ್ಭವಿಸುತ್ತದೆ. ಅದೇ ಸಂದರ್ಭದಲ್ಲಿ ಸಿಎಂಗೆ ಒಂದು ರೀತಿಯಲ್ಲಿ, ಪಿಎಂಗೆ ಇನ್ನೊಂದು ರೀತಿಯಲ್ಲಿ ಚುನಾವಣಾ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರಾ ಎಂಬುದು ಸಹಜವಾಗಿಯೇ ಮೂಡಿಬರುವ ಪ್ರಶ್ನೆ.

ಆದರೆ, ಅಂತಿಮ ಅಭಿಪ್ರಾಯಕ್ಕೆ ಬರುವ ಮುಂಚೆ ಯಾವುದಕ್ಕೂ ಬಿಜೆಪಿಯ ವತಿಯಿಂದ ಅಥವಾ ಚುನಾವಣಾ ಆಯೋಗದದ ವತಿಯಿಂದ ಸ್ಪಷ್ಟೀಕರಣ ಬರುತ್ತದಾ ಕಾದು ನೋಡಬೇಕು. ಈ ಕುರಿತು ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡುರಾವ್ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

 

ಅಪ್‌ಡೇಟ್: 14.04.2019

ಚಿತ್ರದುರ್ಗದಲ್ಲಿ ಮೋದಿಯವರ ಹೆಲಿಕಾಪ್ಟರ್ ಜೊತೆಗೆ ಬಂದ ಸೂಟ್‌ಕೇಸ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ನಿನ್ನೆ ದೂರು ನೀಡಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್ ಅದು ಭದ್ರತೆಗೆ ಸಂಬಂಧಿಸಿದ್ದು ಎಂದು ಸಂಬಂಧಪಟ್ಟ ಇಲಾಖೆಯವರು ಹೇಳಿದ್ದಾರೆ. ಆದರೆ, ಅದನ್ನು ಪರಿಶೀಲಿಸಿ ತಪಾಸಣೆ ನಡೆಸಬೇಕಾದದ್ದು ಪೊಲೀಸರಲ್ಲ, ಚುನಾವಣಾಧಿಕಾರಿಗಳು. ನೀವು ಹೆಚ್ಚಿನ ಮಾಹಿತಿಗೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಯವರನ್ನು ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿಗಳಿಂದ ಇನ್ನೂ ಹೇಳಿಕೆ ಹೊರಬಿದ್ದಿಲ್ಲ.

ಈ ಮಧ್ಯೆ ಬಿಜೆಪಿಯು ಹೇಳಿಕೆ ನೀಡಿ, ಆ ಬಾಕ್ಸ್‌ನಲ್ಲಿ ಮೋದಿಯವರು ಭಾಷಣ ಮಾಡುವಾಗ ವೇದಿಕೆಯ ಮೇಲೆ ಬಳಸಲಾಗುವ ಉಪಕರಣಗಳಿರುತ್ತವೆ ಎಂದಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ದೆಹಲಿಯಲ್ಲಿ ಹೇಳಿಕೆ ನೀಡಿ ಆ ಬಾಕ್ಸ್‌ಅನ್ನು ಖಾಸಗಿ ವಾಹನದಲ್ಲಿ ಏಕೆ ತೆಗೆದುಕೊಂಡು ಹೋಗಲಾಯಿತು? ಅದು ಪ್ರಧಾನಿಯ ಎಸ್‌ಪಿಜಿ ಪ್ರೋಟೋಕಾಲ್‌ನ ಭಾಗ ಏಕೆ ಆಗಿರಲಿಲ್ಲ? ಈ ಕುರಿತು ಎಸ್‌ಪಿಜಿ ಉತ್ತರ ನೀಡಬೇಕು ಎಂದಿದ್ದಾರೆ.

ಮೊಟ್ಟಮೊದಲು ಕಾಂಗ್ರೆಸ್‌ನ ಕೇಂದ್ರೀಯ ಐಟಿ ವಿಭಾಗದ ಶ್ರೀವತ್ಸ ಇದನ್ನು ಏಪ್ರಿಲ್ 12ರಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...