Homeಕರ್ನಾಟಕಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

- Advertisement -
- Advertisement -

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳುತ್ತಿದ್ದಂತೆ, ಅವರ ಹೆಲಿಕಾಪ್ಟರ್‍ನಿಂದ ಭಾರದ ಸೂಟ್‍ಕೇಸ್ ಒಂದನ್ನು ಇಳಿಸಲಾಗಿದೆ. ಒಬ್ಬರಲ್ಲಾ ಇಬ್ಬರು ವ್ಯಕ್ತಿಗಳು ಅದನ್ನು ಕಷ್ಟಪಟ್ಟು ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿದರೆ, ಅದು ಬಹಳ ಭಾರ ಇರುವುದು ಗೊತ್ತಾಗುತ್ತದೆ. ಆ ಸೂಟ್‍ಕೇಸನ್ನು ನಂತರ ಒಂದು ಇನ್ನೋವಾ ಕಾರಿನಲ್ಲಿ ಇಡಲಾಗುತ್ತದೆ. ಕೂಡಲೇ ಕಾರು ವೇಗವಾಗಿ ಅಲ್ಲಿಂದ ತೆರಳುತ್ತದೆ.

ಇದರಿಂದ ಎದ್ದಿರುವ ಪ್ರಶ್ನೆಗಳಿಗೆ ಇದುವರೆಗೆ ಬಿಜೆಪಿ ಪಕ್ಷವಾಗಲೀ, ಚುನಾವಣಾ ಆಯೋಗವಾಗಲಿ ಉತ್ತರಿಸಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತ ಹೆಚ್ಚು ಬಾರಿ ಅದನ್ನು ತಡೆದು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ‘ಎಷ್ಟು ಬೇಕಾದರೂ ಚೆಕ್ ಮಾಡಿ’ ಎಂದು ಮುಖ್ಯಮಂತ್ರಿಗಳು ಸಿಟ್ಟಿನಿಂದ ಹೇಳಿದರೆಂದು ವರದಿಯಾಗಿದೆ.

ಆದರೆ, ಇದೀಗ ಮೋದಿಯವರ ಹೆಲಿಕಾಪ್ಟರ್‍ನಿಂದ ಇಳಿಸಲಾದ ಭಾರದ ಸೂಟ್‍ಕೇಸ್ ಮತ್ತು ಇನ್ನೋವಾ ಕಾರನ್ನು ತಪಾಸಣೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಮೋದಿ ಬಂದಾಗ ಬೆಂಗಾವಲು ಪಡೆ ವಾಹನದಿಂದ ಖಾಸಗಿ ವಾಹನಕ್ಕೆ ರಹಸ್ಯ ಸೂಟ್ ಕೇಸ್ ಗಡಿಬಿಡಿಯಲ್ಲಿ ಟ್ರಾನ್ಸಫರ್! ಚುನಾವಣೆಗೆ ದುಡ್ಡು ಸಪ್ಲೈ ಮಾಡಲು ಮೋದಿಯಿಂದ ಬೆಂಗಾವಲು ಪಡೆ ದುರುಪಯೋಗ?

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, १३ एप्रिल, २०१९

ಕಳೆದ ತಿಂಗಳು ಪ್ರಜಾವಾಣಿ ಪತ್ರಿಕೆಯಲ್ಲಿ ‘ಚುನಾವಣಾ ಸಂದರ್ಭದಲ್ಲಿ ಹಣವನ್ನು ಹೇಗೆ ಸಾಗಿಸಲಾಗುತ್ತದೆ’ ಎಂಬ ಕುರಿತು ವಿವರವಾದ ವರದಿ ಪ್ರಕಟವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇನ್ನೊಬ್ಬ ಪೊಲೀಸ್ ಅಧಿಕಾರಿ ಹಣ ಸಾಗಿಸುವ ಜವಾಬ್ದಾರಿ ಹೊತ್ತುಕೊಂಡಿದ್ದರು ಎಂದು ಅದರಲ್ಲಿ ಹೇಳಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ದಾಟಿ ಅಧಿಕಾರದಲ್ಲಿರುವ ದೊಡ್ಡ ನಾಯಕರುಗಳೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಅನುಮಾನ ಉದ್ಭವಿಸುತ್ತದೆ. ಅದೇ ಸಂದರ್ಭದಲ್ಲಿ ಸಿಎಂಗೆ ಒಂದು ರೀತಿಯಲ್ಲಿ, ಪಿಎಂಗೆ ಇನ್ನೊಂದು ರೀತಿಯಲ್ಲಿ ಚುನಾವಣಾ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರಾ ಎಂಬುದು ಸಹಜವಾಗಿಯೇ ಮೂಡಿಬರುವ ಪ್ರಶ್ನೆ.

ಆದರೆ, ಅಂತಿಮ ಅಭಿಪ್ರಾಯಕ್ಕೆ ಬರುವ ಮುಂಚೆ ಯಾವುದಕ್ಕೂ ಬಿಜೆಪಿಯ ವತಿಯಿಂದ ಅಥವಾ ಚುನಾವಣಾ ಆಯೋಗದದ ವತಿಯಿಂದ ಸ್ಪಷ್ಟೀಕರಣ ಬರುತ್ತದಾ ಕಾದು ನೋಡಬೇಕು. ಈ ಕುರಿತು ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡುರಾವ್ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

 

ಅಪ್‌ಡೇಟ್: 14.04.2019

ಚಿತ್ರದುರ್ಗದಲ್ಲಿ ಮೋದಿಯವರ ಹೆಲಿಕಾಪ್ಟರ್ ಜೊತೆಗೆ ಬಂದ ಸೂಟ್‌ಕೇಸ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ನಿನ್ನೆ ದೂರು ನೀಡಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್ ಅದು ಭದ್ರತೆಗೆ ಸಂಬಂಧಿಸಿದ್ದು ಎಂದು ಸಂಬಂಧಪಟ್ಟ ಇಲಾಖೆಯವರು ಹೇಳಿದ್ದಾರೆ. ಆದರೆ, ಅದನ್ನು ಪರಿಶೀಲಿಸಿ ತಪಾಸಣೆ ನಡೆಸಬೇಕಾದದ್ದು ಪೊಲೀಸರಲ್ಲ, ಚುನಾವಣಾಧಿಕಾರಿಗಳು. ನೀವು ಹೆಚ್ಚಿನ ಮಾಹಿತಿಗೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಯವರನ್ನು ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿಗಳಿಂದ ಇನ್ನೂ ಹೇಳಿಕೆ ಹೊರಬಿದ್ದಿಲ್ಲ.

ಈ ಮಧ್ಯೆ ಬಿಜೆಪಿಯು ಹೇಳಿಕೆ ನೀಡಿ, ಆ ಬಾಕ್ಸ್‌ನಲ್ಲಿ ಮೋದಿಯವರು ಭಾಷಣ ಮಾಡುವಾಗ ವೇದಿಕೆಯ ಮೇಲೆ ಬಳಸಲಾಗುವ ಉಪಕರಣಗಳಿರುತ್ತವೆ ಎಂದಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ದೆಹಲಿಯಲ್ಲಿ ಹೇಳಿಕೆ ನೀಡಿ ಆ ಬಾಕ್ಸ್‌ಅನ್ನು ಖಾಸಗಿ ವಾಹನದಲ್ಲಿ ಏಕೆ ತೆಗೆದುಕೊಂಡು ಹೋಗಲಾಯಿತು? ಅದು ಪ್ರಧಾನಿಯ ಎಸ್‌ಪಿಜಿ ಪ್ರೋಟೋಕಾಲ್‌ನ ಭಾಗ ಏಕೆ ಆಗಿರಲಿಲ್ಲ? ಈ ಕುರಿತು ಎಸ್‌ಪಿಜಿ ಉತ್ತರ ನೀಡಬೇಕು ಎಂದಿದ್ದಾರೆ.

ಮೊಟ್ಟಮೊದಲು ಕಾಂಗ್ರೆಸ್‌ನ ಕೇಂದ್ರೀಯ ಐಟಿ ವಿಭಾಗದ ಶ್ರೀವತ್ಸ ಇದನ್ನು ಏಪ್ರಿಲ್ 12ರಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...