Homeಕರ್ನಾಟಕಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

- Advertisement -
- Advertisement -

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳುತ್ತಿದ್ದಂತೆ, ಅವರ ಹೆಲಿಕಾಪ್ಟರ್‍ನಿಂದ ಭಾರದ ಸೂಟ್‍ಕೇಸ್ ಒಂದನ್ನು ಇಳಿಸಲಾಗಿದೆ. ಒಬ್ಬರಲ್ಲಾ ಇಬ್ಬರು ವ್ಯಕ್ತಿಗಳು ಅದನ್ನು ಕಷ್ಟಪಟ್ಟು ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿದರೆ, ಅದು ಬಹಳ ಭಾರ ಇರುವುದು ಗೊತ್ತಾಗುತ್ತದೆ. ಆ ಸೂಟ್‍ಕೇಸನ್ನು ನಂತರ ಒಂದು ಇನ್ನೋವಾ ಕಾರಿನಲ್ಲಿ ಇಡಲಾಗುತ್ತದೆ. ಕೂಡಲೇ ಕಾರು ವೇಗವಾಗಿ ಅಲ್ಲಿಂದ ತೆರಳುತ್ತದೆ.

ಇದರಿಂದ ಎದ್ದಿರುವ ಪ್ರಶ್ನೆಗಳಿಗೆ ಇದುವರೆಗೆ ಬಿಜೆಪಿ ಪಕ್ಷವಾಗಲೀ, ಚುನಾವಣಾ ಆಯೋಗವಾಗಲಿ ಉತ್ತರಿಸಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತ ಹೆಚ್ಚು ಬಾರಿ ಅದನ್ನು ತಡೆದು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ‘ಎಷ್ಟು ಬೇಕಾದರೂ ಚೆಕ್ ಮಾಡಿ’ ಎಂದು ಮುಖ್ಯಮಂತ್ರಿಗಳು ಸಿಟ್ಟಿನಿಂದ ಹೇಳಿದರೆಂದು ವರದಿಯಾಗಿದೆ.

ಆದರೆ, ಇದೀಗ ಮೋದಿಯವರ ಹೆಲಿಕಾಪ್ಟರ್‍ನಿಂದ ಇಳಿಸಲಾದ ಭಾರದ ಸೂಟ್‍ಕೇಸ್ ಮತ್ತು ಇನ್ನೋವಾ ಕಾರನ್ನು ತಪಾಸಣೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಮೋದಿ ಬಂದಾಗ ಬೆಂಗಾವಲು ಪಡೆ ವಾಹನದಿಂದ ಖಾಸಗಿ ವಾಹನಕ್ಕೆ ರಹಸ್ಯ ಸೂಟ್ ಕೇಸ್ ಗಡಿಬಿಡಿಯಲ್ಲಿ ಟ್ರಾನ್ಸಫರ್! ಚುನಾವಣೆಗೆ ದುಡ್ಡು ಸಪ್ಲೈ ಮಾಡಲು ಮೋದಿಯಿಂದ ಬೆಂಗಾವಲು ಪಡೆ ದುರುಪಯೋಗ?

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, १३ एप्रिल, २०१९

ಕಳೆದ ತಿಂಗಳು ಪ್ರಜಾವಾಣಿ ಪತ್ರಿಕೆಯಲ್ಲಿ ‘ಚುನಾವಣಾ ಸಂದರ್ಭದಲ್ಲಿ ಹಣವನ್ನು ಹೇಗೆ ಸಾಗಿಸಲಾಗುತ್ತದೆ’ ಎಂಬ ಕುರಿತು ವಿವರವಾದ ವರದಿ ಪ್ರಕಟವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇನ್ನೊಬ್ಬ ಪೊಲೀಸ್ ಅಧಿಕಾರಿ ಹಣ ಸಾಗಿಸುವ ಜವಾಬ್ದಾರಿ ಹೊತ್ತುಕೊಂಡಿದ್ದರು ಎಂದು ಅದರಲ್ಲಿ ಹೇಳಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ದಾಟಿ ಅಧಿಕಾರದಲ್ಲಿರುವ ದೊಡ್ಡ ನಾಯಕರುಗಳೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಅನುಮಾನ ಉದ್ಭವಿಸುತ್ತದೆ. ಅದೇ ಸಂದರ್ಭದಲ್ಲಿ ಸಿಎಂಗೆ ಒಂದು ರೀತಿಯಲ್ಲಿ, ಪಿಎಂಗೆ ಇನ್ನೊಂದು ರೀತಿಯಲ್ಲಿ ಚುನಾವಣಾ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರಾ ಎಂಬುದು ಸಹಜವಾಗಿಯೇ ಮೂಡಿಬರುವ ಪ್ರಶ್ನೆ.

ಆದರೆ, ಅಂತಿಮ ಅಭಿಪ್ರಾಯಕ್ಕೆ ಬರುವ ಮುಂಚೆ ಯಾವುದಕ್ಕೂ ಬಿಜೆಪಿಯ ವತಿಯಿಂದ ಅಥವಾ ಚುನಾವಣಾ ಆಯೋಗದದ ವತಿಯಿಂದ ಸ್ಪಷ್ಟೀಕರಣ ಬರುತ್ತದಾ ಕಾದು ನೋಡಬೇಕು. ಈ ಕುರಿತು ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡುರಾವ್ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

 

ಅಪ್‌ಡೇಟ್: 14.04.2019

ಚಿತ್ರದುರ್ಗದಲ್ಲಿ ಮೋದಿಯವರ ಹೆಲಿಕಾಪ್ಟರ್ ಜೊತೆಗೆ ಬಂದ ಸೂಟ್‌ಕೇಸ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ನಿನ್ನೆ ದೂರು ನೀಡಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್ ಅದು ಭದ್ರತೆಗೆ ಸಂಬಂಧಿಸಿದ್ದು ಎಂದು ಸಂಬಂಧಪಟ್ಟ ಇಲಾಖೆಯವರು ಹೇಳಿದ್ದಾರೆ. ಆದರೆ, ಅದನ್ನು ಪರಿಶೀಲಿಸಿ ತಪಾಸಣೆ ನಡೆಸಬೇಕಾದದ್ದು ಪೊಲೀಸರಲ್ಲ, ಚುನಾವಣಾಧಿಕಾರಿಗಳು. ನೀವು ಹೆಚ್ಚಿನ ಮಾಹಿತಿಗೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಯವರನ್ನು ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿಗಳಿಂದ ಇನ್ನೂ ಹೇಳಿಕೆ ಹೊರಬಿದ್ದಿಲ್ಲ.

ಈ ಮಧ್ಯೆ ಬಿಜೆಪಿಯು ಹೇಳಿಕೆ ನೀಡಿ, ಆ ಬಾಕ್ಸ್‌ನಲ್ಲಿ ಮೋದಿಯವರು ಭಾಷಣ ಮಾಡುವಾಗ ವೇದಿಕೆಯ ಮೇಲೆ ಬಳಸಲಾಗುವ ಉಪಕರಣಗಳಿರುತ್ತವೆ ಎಂದಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ದೆಹಲಿಯಲ್ಲಿ ಹೇಳಿಕೆ ನೀಡಿ ಆ ಬಾಕ್ಸ್‌ಅನ್ನು ಖಾಸಗಿ ವಾಹನದಲ್ಲಿ ಏಕೆ ತೆಗೆದುಕೊಂಡು ಹೋಗಲಾಯಿತು? ಅದು ಪ್ರಧಾನಿಯ ಎಸ್‌ಪಿಜಿ ಪ್ರೋಟೋಕಾಲ್‌ನ ಭಾಗ ಏಕೆ ಆಗಿರಲಿಲ್ಲ? ಈ ಕುರಿತು ಎಸ್‌ಪಿಜಿ ಉತ್ತರ ನೀಡಬೇಕು ಎಂದಿದ್ದಾರೆ.

ಮೊಟ್ಟಮೊದಲು ಕಾಂಗ್ರೆಸ್‌ನ ಕೇಂದ್ರೀಯ ಐಟಿ ವಿಭಾಗದ ಶ್ರೀವತ್ಸ ಇದನ್ನು ಏಪ್ರಿಲ್ 12ರಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...